'ಫೆ. 2ರಂದು ಮನೆಯಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿದ್ದ ರೌಡಿ, ಪೈಪ್ನಿಂದ ಹೊಡೆದಿದ್ದ. ತೀವ್ರ ಗಾಯಗೊಂಡು ಬಾಲಕ ಮನೆಯಲ್ಲೇ ಮೃತಪಟ್ಟಿದ್ದ. ತಾಯಿಯನ್ನು ಮನೆಗೆ ಕರೆಸಿಕೊಂಡಿದ್ದ ಆರೋಪಿ, ಗಲಾಟೆ ಮಾಡಿದ್ದಕ್ಕೆ ಕೊಲೆ ಮಾಡಿದೆ ಎಂದಿದ್ದ. 'ನಮ್ಮಿಬ್ಬರ ಸಂಬಂಧವನ್ನು ಮುಂದುವರಿಸೋಣ. ಈ ಕೊಲೆ ವಿಷಯವನ್ನು ಯಾರಿಗೂ ಹೇಳಬೇಡ' ಎಂದು ಹೇಳಿದ್ದ. ಅದಕ್ಕೆ ಒಪ್ಪಿದ್ದ ಆಕೆ, ರೌಡಿ ಜೊತೆ ಸೇರಿ ಮಗನ ಮೃತದೇಹವನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿ ತಮಿಳುನಾಡು ಬಳಿಯ ಬರಗೂರ್ ಸಮೀಪದ ನಿರ್ಜನ ಪ್ರದೇಶದಲ್ಲಿ ಎಸೆದು ಬಂದಿದ್ದರು.'