<p><strong>ಬೆಂಗಳೂರು: </strong>ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸುನೀಲ್ ಅಲಿಯಾಸ್ ಕಾಡುನನ್ನು (34) ಮಾರಕಾಸ್ತ್ರಗಳಿಂದ ಕೊಚ್ಚಿ ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ.</p>.<p>‘ಸ್ಥಳೀಯ ನಿವಾಸಿಯಾಗಿದ್ದ ಸುನೀಲ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬ್ಯಾಟರಾಯನಪುರ ಠಾಣೆ ರೌಡಿ ಪಟ್ಟಿಯಲ್ಲಿ ಆತನ ಹೆಸರಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಸುನೀಲ್ನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಸುನೀಲ್ ರಸ್ತೆಯಲ್ಲೇ ನರಳಿ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ರೌಡಿ ಸೋಮನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುನೀಲ್, ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ಅದೇ ಕಾರಣಕ್ಕೆ ಸುನೀಲ್ ಹಾಗೂ ರೌಡಿ ಸೋಮನ ಸಹಚರರ ನಡುವೆ ಆಗಾಗ ಜಗಳವಾಗುತ್ತಿತ್ತು. ಸೋಮನ ಸಹಚರರೇ ಕೃತ್ಯ ಎಸಗಿರುವ ಅನುಮಾನವಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸುನೀಲ್ ಅಲಿಯಾಸ್ ಕಾಡುನನ್ನು (34) ಮಾರಕಾಸ್ತ್ರಗಳಿಂದ ಕೊಚ್ಚಿ ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ.</p>.<p>‘ಸ್ಥಳೀಯ ನಿವಾಸಿಯಾಗಿದ್ದ ಸುನೀಲ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬ್ಯಾಟರಾಯನಪುರ ಠಾಣೆ ರೌಡಿ ಪಟ್ಟಿಯಲ್ಲಿ ಆತನ ಹೆಸರಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಸುನೀಲ್ನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಸುನೀಲ್ ರಸ್ತೆಯಲ್ಲೇ ನರಳಿ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ರೌಡಿ ಸೋಮನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುನೀಲ್, ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ಅದೇ ಕಾರಣಕ್ಕೆ ಸುನೀಲ್ ಹಾಗೂ ರೌಡಿ ಸೋಮನ ಸಹಚರರ ನಡುವೆ ಆಗಾಗ ಜಗಳವಾಗುತ್ತಿತ್ತು. ಸೋಮನ ಸಹಚರರೇ ಕೃತ್ಯ ಎಸಗಿರುವ ಅನುಮಾನವಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>