ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ, ಸುಲಿಗೆ: ಗೂಂಡಾ ಕಾಯ್ದೆಯಡಿ 'ಮಿಂಡ' ಬಂಧನ

Last Updated 3 ಸೆಪ್ಟೆಂಬರ್ 2020, 8:06 IST
ಅಕ್ಷರ ಗಾತ್ರ

ಬೆಂಗಳೂರು; ಕೊಲೆ, ಕೊಲೆಗೆ ಯತ್ನ, ಸುಲಿಗೆ, ದರೋಡೆ ಅಪರಾಧಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ವಿನಯ್‌ಕುಮಾರ್ ಅಲಿಯಾಸ್ ಮಿಂಡ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

'ಮಹಾಲಕ್ಷ್ಮಿ ಲೇಔಟ್‌ನ ಗೆಳೆಯರ ಬಳಗ ಬಳಿಯ ಶ್ರೀರಾಮನಗರ ನಿವಾಸಿಯಾದ ವಿನಯ್‌ಕುಮಾರ್, 2010ರಿಂದಲೇ ಅಪರಾಧ ಕೃತ್ಯ ಎಸಗುತ್ತಿದ್ದ' ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.

'ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್, ಪೀಣ್ಯ, ವಿಲ್ಸನ್ ಗಾರ್ಡನ್ ಹಾಗೂ ವೈಯಾಲಿಕಾವಲ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದವು. 2015ರಲ್ಲೇ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಕೆಲ ದಿನ ಜೈಲಿನಲ್ಲಿದ್ದ ಆತ, ನಂತರ ಜೈಲಿನಿಂದ ಹೊರಬಂದಿದ್ದ' ಎಂದೂ ತಿಳಿಸಿದರು.

'ಅಪರಾಧ ಚಟುವಟಿಕೆ ಮುಂದುವರಿಸಿದ್ದ ಆತ, ಜನರನ್ನು ಹೆದರಿಸುತ್ತಿದ್ದ. ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ. ಹೀಗಾಗಿ, ಆತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ' ಎಂದೂ ಹೇಳಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT