ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆಗೆ ಸಂಚು; ಸಹಚರರ ಸಮೇತ ರೌಡಿಗಳ ಬಂಧನ

Last Updated 7 ಸೆಪ್ಟೆಂಬರ್ 2021, 16:57 IST
ಅಕ್ಷರ ಗಾತ್ರ

ಬೆಂಗಳೂರು: ಎದುರಾಳಿ ತಂಡದವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಇಬ್ಬರು ರೌಡಿಗಳು ಹಾಗೂ ಅವರ ಐವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಬನ್ನೇರುಘಟ್ಟ ರಸ್ತೆಯ ಲಕ್ಷ್ಮಿನಾರಾಯಣ್ ಅಲಿಯಾಸ್ ಲಕ್ಷ್ಮಿ, ರಾಕೇಶ್ ಅಲಿಯಾಸ್ ರಾಖಿ, ಹರೀಶ್, ಬಿಳೇಕಹಳ್ಳಿಯ ನವೀನ್, ಕಿಶೋರ್, ದೇವರ ಚಿಕ್ಕನಹಳ್ಳಿಯ ವಿನೋದ್ ಹಾಗೂ ನಾಗರಾಜ್ ಬಂಧಿತರು. ಅವರಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

‘ಜಯನಗರ ಠಾಣೆಯ ರೌಡಿಗಳ ಪಟ್ಟಿಯಲ್ಲಿ ಲಕ್ಷ್ಮಿ ಹಾಗೂ ರಾಖಿ ಹೆಸರಿದೆ. ಇವರಿಬ್ಬರು, ತಮ್ಮ ಎದುರಾಳಿಗಳನ್ನು ಕೊಲೆ ಮಾಡಲು ಸಜ್ಜಾಗಿದ್ದರು. ಸಾರ್ವಜನಿಕರನ್ನು ಸುಲಿಗೆ ಮಾಡಲು ಸಹ ಸಂಚು ರೂಪಿಸಿದ್ದರು. ಸೆ.2ರಂದು ಬನ್ನೇರುಘಟ್ಟ ರಸ್ತೆಯ ಗುರು ಪ್ಯಾಲೇಸ್ ಬಳಿ ಸಹಚರರ ಜೊತೆ ರೌಡಿಗಳು ಕಾಣಿಸಿಕೊಂಡಿದ್ದರು. ಅವರೆಲ್ಲರ ಬಳಿ ಮಾರಕಾಸ್ತ್ರಗಳು ಇದ್ದವು.’

‘ಸಂಚಿನ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಸಹಚರರ ಸಮೇತ ರೌಡಿಗಳನ್ನು ಬಂಧಿಸಲಾಗಿದೆ. ಈ ಕುರಿತು ಹುಳಿಮಾವು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ’ ಎಂದೂ ಸಿಸಿಬಿ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT