<p><strong>ಬೆಂಗಳೂರು: </strong>ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತರ ನಡುವೆ ಆರಂಭಗೊಂಡ ಜಗಳದಲ್ಲಿ ಒಬ್ಬ ಕೊಲೆಯಾಗಿದ್ದು, ಇಬ್ಬರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.</p>.<p>ದೊಮ್ಮಲೂರು ಬಡಾವಣೆಯ ಎ.ಕೆ.ಕಾಲೊನಿ ನಿವಾಸಿ ಸ್ಟೀಫನ್ ಕೊಲೆಯಾದ ವ್ಯಕ್ತಿ. ಅದೇ ಬಡಾವಣೆಯ ಮನು (23) ಹಾಗೂ ನಾಗರಾಜ್ (54) ಬಂಧಿತರು.</p>.<p>ಹಲಸೂರು ಠಾಣೆಯ ವ್ಯಾಪ್ತಿಯ ಬಯಲು ರಂಗಮಂದಿರದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಘಟನೆ ನಡೆದಿದ್ದ ಅಕ್ಕಪಕ್ಕದ ಸ್ಥಳಗಳಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ಆರೋಪಿಗಳ ಚಲನವಲನ ಸೆರೆಯಾಗಿತ್ತು. ಇದನ್ನು ಆಧರಿಸಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.</p>.<p>‘ಕೂಲಿ ಕೆಲಸ ಮಾಡಿಕೊಂಡಿದ್ದ ಸ್ಟೀಫನ್ ಹಾಗೂ ಆರೋಪಿಗಳು ಸ್ನೇಹಿತರು. ವಾರಕ್ಕೊಮ್ಮೆ ಒಟ್ಟಾಗಿ ಸೇರಿ ಮದ್ಯಪಾನ ಮಾಡುತ್ತಿದ್ದರು. ಕಳೆದ ಭಾನುವಾರ ರಾತ್ರಿಯೂ ದೊಮ್ಮಲೂರು ಬಯಲು ರಂಗಮಂದಿರದ ಬಳಿ ಮದ್ಯಪಾನ ಮಾಡಿದ್ದರು. ಸ್ಟೀಫನ್ ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಈ ವೇಳೆ ಮೂವರ ನಡುವೆ ಜಗಳ ಶುರುವಾಗಿತ್ತು’.</p>.<p>‘ಅಮಲಿನಲ್ಲಿ ಸ್ಟೀಫನ್ ಮೇಲೆ ಇಬ್ಬರೂ ಹಲ್ಲೆ ನಡೆಸಿ, ಬಯಲು ರಂಗಮಂದಿರದ ಒಳಭಾಗದಲ್ಲಿರುವ ಕಾಲುವೆಗೆ ತಳ್ಳಿದ್ದರು. ಬಳಿಕ ಸಿಮೆಂಟ್ ಇಟ್ಟಿಗೆಗಳನ್ನು ಸ್ಟೀಫನ್ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತರ ನಡುವೆ ಆರಂಭಗೊಂಡ ಜಗಳದಲ್ಲಿ ಒಬ್ಬ ಕೊಲೆಯಾಗಿದ್ದು, ಇಬ್ಬರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.</p>.<p>ದೊಮ್ಮಲೂರು ಬಡಾವಣೆಯ ಎ.ಕೆ.ಕಾಲೊನಿ ನಿವಾಸಿ ಸ್ಟೀಫನ್ ಕೊಲೆಯಾದ ವ್ಯಕ್ತಿ. ಅದೇ ಬಡಾವಣೆಯ ಮನು (23) ಹಾಗೂ ನಾಗರಾಜ್ (54) ಬಂಧಿತರು.</p>.<p>ಹಲಸೂರು ಠಾಣೆಯ ವ್ಯಾಪ್ತಿಯ ಬಯಲು ರಂಗಮಂದಿರದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಘಟನೆ ನಡೆದಿದ್ದ ಅಕ್ಕಪಕ್ಕದ ಸ್ಥಳಗಳಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ಆರೋಪಿಗಳ ಚಲನವಲನ ಸೆರೆಯಾಗಿತ್ತು. ಇದನ್ನು ಆಧರಿಸಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.</p>.<p>‘ಕೂಲಿ ಕೆಲಸ ಮಾಡಿಕೊಂಡಿದ್ದ ಸ್ಟೀಫನ್ ಹಾಗೂ ಆರೋಪಿಗಳು ಸ್ನೇಹಿತರು. ವಾರಕ್ಕೊಮ್ಮೆ ಒಟ್ಟಾಗಿ ಸೇರಿ ಮದ್ಯಪಾನ ಮಾಡುತ್ತಿದ್ದರು. ಕಳೆದ ಭಾನುವಾರ ರಾತ್ರಿಯೂ ದೊಮ್ಮಲೂರು ಬಯಲು ರಂಗಮಂದಿರದ ಬಳಿ ಮದ್ಯಪಾನ ಮಾಡಿದ್ದರು. ಸ್ಟೀಫನ್ ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಈ ವೇಳೆ ಮೂವರ ನಡುವೆ ಜಗಳ ಶುರುವಾಗಿತ್ತು’.</p>.<p>‘ಅಮಲಿನಲ್ಲಿ ಸ್ಟೀಫನ್ ಮೇಲೆ ಇಬ್ಬರೂ ಹಲ್ಲೆ ನಡೆಸಿ, ಬಯಲು ರಂಗಮಂದಿರದ ಒಳಭಾಗದಲ್ಲಿರುವ ಕಾಲುವೆಗೆ ತಳ್ಳಿದ್ದರು. ಬಳಿಕ ಸಿಮೆಂಟ್ ಇಟ್ಟಿಗೆಗಳನ್ನು ಸ್ಟೀಫನ್ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>