ಬೆಂಗಳೂರು: ‘ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ಆ್ಯಪ್ನಲ್ಲಿ ಹರಿಬಿಟ್ಟಿರುವ ಶಾಸಕ ಮುರುಗೇಶ ನಿರಾಣಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕಾಮಾಕ್ಷಿಪಾಳ್ಯದ ಹನುಮೇಗೌಡ ಎಂಬುವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.
‘ಶಾಸಕ ನಿರಾಣಿ ಅವರು, ಹಿಂದೂ ಧರ್ಮದ ರಾಮ, ಕೃಷ್ಣ ಸೇರಿ ಮುಂತಾದ ದೇವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ’ ಎಂದೂ ಹನುಮೇಗೌಡ ಆರೋಪಿಸಿದ್ದಾರೆ.