₹ 8.5 ಕೋಟಿಯಲ್ಲಿ ನವೀಕರಣ ಕಾಮಗಾರಿಯನ್ನು ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕೈಗೆತ್ತಿಕೊಂಡಿದ್ದು, ಕಳೆದ ಒಂಬತ್ತು ತಿಂಗಳಿಂದ ಕಾಮಗಾರಿ ಪ್ರಗತಿಯಲ್ಲಿದೆ. ಹೀಗಾಗಿ, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ವಸ್ತು ಸಂಗ್ರಹಾಲಯಕ್ಕೆ ಹೊಂದಿಕೊಂಡು ₹ 26 ಕೋಟಿಯಲ್ಲಿ ಪ್ರಾಚ್ಯವಸ್ತು ಸಂಗ್ರಹ ಕೇಂದ್ರ ನಿರ್ಮಿಸಲು ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸದ್ಯ ಪ್ರಾಚ್ಯವಸ್ತುಗಳನ್ನು ಇರಿಸಲು ಸೂಕ್ತ ವ್ಯವಸ್ಥೆ ಇಲ್ಲವಾದ್ದರಿಂದ ಸಮಸ್ಯೆಯಾಗಿದೆ.