ಆನೇಕಲ್ನ 100 ಶಿಬಿರಾರ್ಥಿಗಳು ಏಕಕಾಲದಲ್ಲಿ ಗಾಯನ ನಡೆಸಲಿದ್ದು, ಇದಕ್ಕಾಗಿ ತಯಾರಿ ನಡೆಸಿದ್ದಾರೆ. ಸಮ್ಮೇಳನವನ್ನು ಕವಿ ದೊಡ್ಡರಂಗೇಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಬಿ. ಶಿವಣ್ಣ, ಸಂಸದ ಡಿ.ಕೆ. ಸುರೇಶ್, ಕರ್ನಾಟಕ ರಾಜ್ಯ ಸುಗಮ ಸಂಗೀತ ಪರಿಷತ್ನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ, ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಪಾಲ್ಗೊಳ್ಳಲಿದ್ದಾರೆ.