‘ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಸಂಜೆ 5ರಿಂದ 9ರವರೆಗೆ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಚಿತ್ರ ನಟ ವಿಜಯ ರಾಘವೇಂದ್ರ ಹಾಗೂ ಸಂಗೀತ ನಿರ್ದೇಶಕ ವಿ. ಮನೋಹರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಿಂದ ಸಂಗ್ರಹವಾಗುವ ಮೊತ್ತವನ್ನು ಅಂಧರು, ಅನಾಥರು, ಅಂಗವಿಕಲರು ಹಾಗೂ ವೃದ್ಧರಿಗಾಗಿ ನಡೆಸುವ ಆಶ್ರಮಗಳಿಗೆ ನೀಡುತ್ತೇವೆ’ ಎಂದು ಸಂಸ್ಥೆಯ ಅಧ್ಯಕ್ಷ ನಿವೃತ್ತ ಮುಖ್ಯ ಎಂಜಿನಿಯರ್ ಡಿ. ಉದಯಶಂಕರ್ ತಿಳಿಸಿದ್ದಾರೆ.