<p><strong>ಬೆಂಗಳೂರು:</strong> ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಬಗ್ಗೆ ಹೇಳಿದ್ದೇನು? ಮಾಡಿದ್ದೇನು? ಮುಂದೇನು? ಎಂಬ ವರದಿಯನ್ನು ಮೇ 16ರಂದು ಪುರಭವನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಿಳಿಸಿದೆ. </p>.<p>ಒಕ್ಕೂಟದ ಮುಖಂಡರಾದ ತನ್ವೀರ್ ಅಹಮದ್, ಮೌಲಾನಾ ಮಹಮ್ಮದ್, ಜುಲ್ಫೀಕರ್ ರಜಾ ನೂರಿ, ಶಬ್ಬೀರ್ ಅಹಮದ್ ಹುಸೈನಿ ನದ್ವಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಹಿಜಾಬ್ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ, ದ್ವೇಷ ಅಪರಾಧ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಪ್ರಾತಿನಿಧ್ಯದಲ್ಲಿ ಅಡ್ಡಗಾಲು, ವಕ್ಫ್ ವಿಷಯ, ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿರ್ಬಂಧ ಕಾಯ್ದೆ ತೆರವು, ವಿದ್ಯಾರ್ಥಿವೇತನ, ಶಿಕ್ಷಣ ಕ್ಷೇತ್ರದ ಬೇಡಿಕೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಎಲ್ಲ ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದರು. </p>.<p>‘ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮುಸ್ಲಿಂ ಸಂಘಗಳು ಹಾಗೂ ಒಕ್ಕೂಟದ ಮುಖಂಡರು, ಉಲೇಮಾಗಳು, ವಕೀಲರು, ನಿವೃತ್ತ ಅಧಿಕಾರಿಗಳು, ಹೋರಾಟಗಾರರು ಸೇರಿದಂತೆ ನೂರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದೇವೆ. ಈ ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ಇರುವುದಿಲ್ಲ’ ಎಂದು ತಿಳಿಸಿದರು. </p>.<p>‘ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಯಾವ ರೀತಿಯಾಗಿ ನಡೆಸಿಕೊಳ್ಳುತ್ತಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಲಿವೆ. ಸಮಾವೇಶದಲ್ಲಿ ಬಿಡುಗಡೆಯಾಗುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ನೀಡಲಾಗುವುದು. ಈ ಸಮಾವೇಶದ ಉದ್ದೇಶ ಸಂಘರ್ಷವಲ್ಲ. ಮುಸ್ಲಿಮರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಒತ್ತಡ ಹೇರಲಾಗುವುದು’ ಎಂದರು. </p>.<p>ಸುಹೇಲ್ ಅಹಮದ್ ಮರೂರ್, ಯಹ್ಯಾ ದಾಮೂದಿ ಮಹಮ್ಮದ್ ಹುಸೇನ್ ಷರೀಫ್ ಸುದ್ದಿಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಬಗ್ಗೆ ಹೇಳಿದ್ದೇನು? ಮಾಡಿದ್ದೇನು? ಮುಂದೇನು? ಎಂಬ ವರದಿಯನ್ನು ಮೇ 16ರಂದು ಪುರಭವನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಿಳಿಸಿದೆ. </p>.<p>ಒಕ್ಕೂಟದ ಮುಖಂಡರಾದ ತನ್ವೀರ್ ಅಹಮದ್, ಮೌಲಾನಾ ಮಹಮ್ಮದ್, ಜುಲ್ಫೀಕರ್ ರಜಾ ನೂರಿ, ಶಬ್ಬೀರ್ ಅಹಮದ್ ಹುಸೈನಿ ನದ್ವಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಹಿಜಾಬ್ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ, ದ್ವೇಷ ಅಪರಾಧ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಪ್ರಾತಿನಿಧ್ಯದಲ್ಲಿ ಅಡ್ಡಗಾಲು, ವಕ್ಫ್ ವಿಷಯ, ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿರ್ಬಂಧ ಕಾಯ್ದೆ ತೆರವು, ವಿದ್ಯಾರ್ಥಿವೇತನ, ಶಿಕ್ಷಣ ಕ್ಷೇತ್ರದ ಬೇಡಿಕೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಎಲ್ಲ ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದರು. </p>.<p>‘ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮುಸ್ಲಿಂ ಸಂಘಗಳು ಹಾಗೂ ಒಕ್ಕೂಟದ ಮುಖಂಡರು, ಉಲೇಮಾಗಳು, ವಕೀಲರು, ನಿವೃತ್ತ ಅಧಿಕಾರಿಗಳು, ಹೋರಾಟಗಾರರು ಸೇರಿದಂತೆ ನೂರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದೇವೆ. ಈ ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ಇರುವುದಿಲ್ಲ’ ಎಂದು ತಿಳಿಸಿದರು. </p>.<p>‘ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಯಾವ ರೀತಿಯಾಗಿ ನಡೆಸಿಕೊಳ್ಳುತ್ತಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಲಿವೆ. ಸಮಾವೇಶದಲ್ಲಿ ಬಿಡುಗಡೆಯಾಗುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ನೀಡಲಾಗುವುದು. ಈ ಸಮಾವೇಶದ ಉದ್ದೇಶ ಸಂಘರ್ಷವಲ್ಲ. ಮುಸ್ಲಿಮರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಒತ್ತಡ ಹೇರಲಾಗುವುದು’ ಎಂದರು. </p>.<p>ಸುಹೇಲ್ ಅಹಮದ್ ಮರೂರ್, ಯಹ್ಯಾ ದಾಮೂದಿ ಮಹಮ್ಮದ್ ಹುಸೇನ್ ಷರೀಫ್ ಸುದ್ದಿಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>