ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ಅರ್ಜಿದಾರರ ಮನವಿ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ’ ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಇದರ ಅನುಸಾರ ಅರ್ಜಿದಾರರ ಮನವಿ ಆಲಿಸಿದ್ದ ಇಲಾಖೆ, ಆಯೋಗಕ್ಕೆ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡಿತ್ತು.