<p><strong>ಬೆಂಗಳೂರು:</strong> ವಂಚನೆ ಹಾಗೂ ಜೀವಬೆದರಿಕೆಯೊಡ್ಡಿದ ಆರೋಪದಡಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಹಾಗೂ ಇತರರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಾಗಿದೆ.</p>.<p>‘ಆಸ್ತಿ ಹಾಗೂ ಹಣದ ವಿಚಾರದಲ್ಲಿ ಮುತ್ತಪ್ಪ ರೈ ವಂಚನೆ ಮಾಡಿದ್ದಾರೆ. ಹಣ ನೀಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಈಚೆಗೆ ಸಿಸಿಬಿಗೆ ದೂರು ನೀಡಿದ್ದರು.</p>.<p>‘ದೂರು ದಾಖಲಿಸಿಕೊಳ್ಳಲು ನಮಗೆ ಅಧಿಕಾರವಿಲ್ಲ’ ಎಂದ ಸಿಸಿಬಿ ಪೊಲೀಸರು, ದೂರನ್ನು ಸದಾಶಿವನಗರ ಠಾಣೆಗೆ ಕಳುಹಿಸಿದ್ದಾರೆ. ಅದನ್ನು ಆಧರಿಸಿ ಇದೀಗ ಎನ್ಸಿಆರ್ ದಾಖಲಾಗಿದೆ.</p>.<p>‘10 ವರ್ಷಗಳ ಹಿಂದೆ ಇಬ್ಬರೂ ಸೇರಿಬಂಟ್ವಾಳದಲ್ಲಿ 17.5 ಎಕರೆ ಜಮೀನು ಖರೀದಿಸಿ ನಿವೇಶನಗಳಾಗಿ ಪರಿವರ್ತಿಸಿದ್ದೆವು. 180 ನಿವೇಶನಗಳ ಪೈಕಿ ಸುಮಾರು 70 ನಿವೇಶನಗಳು ಮಾರಾಟವಾಗಿವೆ. ಅದರ, ಹಣದ ಹಂಚಿಕೆ ವಿಚಾರವಾಗಿ ಮುತ್ತಪ್ಪ ರೈ ನನಗೆ ವಂಚಿಸಿದ್ದಾರೆ’ ಎಂದು ದೂರಿನಲ್ಲಿ ರಾಕೇಶ್ ಮಲ್ಲಿ ಆರೋಪಿಸಿದ್ದಾರೆ.</p>.<p>ಸದಾಶಿವನಗರ ಠಾಣೆ ಪೊಲೀಸರು, ‘ನ್ಯಾಯಾಲಯದ ನಿರ್ದೇಶನದಂತೆ ಮುಂದುವರಿಯಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಂಚನೆ ಹಾಗೂ ಜೀವಬೆದರಿಕೆಯೊಡ್ಡಿದ ಆರೋಪದಡಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಹಾಗೂ ಇತರರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಾಗಿದೆ.</p>.<p>‘ಆಸ್ತಿ ಹಾಗೂ ಹಣದ ವಿಚಾರದಲ್ಲಿ ಮುತ್ತಪ್ಪ ರೈ ವಂಚನೆ ಮಾಡಿದ್ದಾರೆ. ಹಣ ನೀಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಈಚೆಗೆ ಸಿಸಿಬಿಗೆ ದೂರು ನೀಡಿದ್ದರು.</p>.<p>‘ದೂರು ದಾಖಲಿಸಿಕೊಳ್ಳಲು ನಮಗೆ ಅಧಿಕಾರವಿಲ್ಲ’ ಎಂದ ಸಿಸಿಬಿ ಪೊಲೀಸರು, ದೂರನ್ನು ಸದಾಶಿವನಗರ ಠಾಣೆಗೆ ಕಳುಹಿಸಿದ್ದಾರೆ. ಅದನ್ನು ಆಧರಿಸಿ ಇದೀಗ ಎನ್ಸಿಆರ್ ದಾಖಲಾಗಿದೆ.</p>.<p>‘10 ವರ್ಷಗಳ ಹಿಂದೆ ಇಬ್ಬರೂ ಸೇರಿಬಂಟ್ವಾಳದಲ್ಲಿ 17.5 ಎಕರೆ ಜಮೀನು ಖರೀದಿಸಿ ನಿವೇಶನಗಳಾಗಿ ಪರಿವರ್ತಿಸಿದ್ದೆವು. 180 ನಿವೇಶನಗಳ ಪೈಕಿ ಸುಮಾರು 70 ನಿವೇಶನಗಳು ಮಾರಾಟವಾಗಿವೆ. ಅದರ, ಹಣದ ಹಂಚಿಕೆ ವಿಚಾರವಾಗಿ ಮುತ್ತಪ್ಪ ರೈ ನನಗೆ ವಂಚಿಸಿದ್ದಾರೆ’ ಎಂದು ದೂರಿನಲ್ಲಿ ರಾಕೇಶ್ ಮಲ್ಲಿ ಆರೋಪಿಸಿದ್ದಾರೆ.</p>.<p>ಸದಾಶಿವನಗರ ಠಾಣೆ ಪೊಲೀಸರು, ‘ನ್ಯಾಯಾಲಯದ ನಿರ್ದೇಶನದಂತೆ ಮುಂದುವರಿಯಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>