<p><strong>ಬೆಂಗಳೂರು</strong>: ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ಹಿಂದೂ ದೇವಾಲಯಗಳ ಪೂಜಾ ಸಾಮಗ್ರಿಗಳ ವೆಚ್ಚಕ್ಕೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸುವಂತೆ ಕೋರಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಒಕ್ಕೂಟದ ಮುಖ್ಯ ಪ್ರಾಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್, ನಿಯೋಗವು ಮಂಗಳವಾರ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.</p>.<p>‘ಸಿ’ ವರ್ಗದ 36 ಸಾವಿರ ದೇವಸ್ಥಾನಗಳ ಪೂಜಾ ಸಾಮಗ್ರಿಗಳು, ವಿದ್ಯುತ್ ವೆಚ್ಚ, ನಿತ್ಯ ಎರಡು ಬಾರಿ ಪೂಜೆ ಮಾಡಲು ಮುಜರಾಯಿ ಇಲಾಖೆ ಮೂಲಕ ಮಾಸಿಕ ₹6 ಸಾವಿರ ಹಣ ನೀಡಲಾಗುತ್ತಿದೆ. ಅದನ್ನು ₹10 ಸಾವಿರಕ್ಕೆ ಏರಿಸುವಂತೆ ಮನವಿ ಮಾಡಲಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳ ಪೂಜಾ ಸಾಮಗ್ರಿಗಳ ವೆಚ್ಚದಲ್ಲಿ ಶೇ 35ರಷ್ಟು ಪಾಲನ್ನು ಇಲಾಖೆ ಭರಿಸುತ್ತಿದೆ. ಅದನ್ನು ಶೇ 50ಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ಹಿಂದೂ ದೇವಾಲಯಗಳ ಪೂಜಾ ಸಾಮಗ್ರಿಗಳ ವೆಚ್ಚಕ್ಕೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸುವಂತೆ ಕೋರಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಒಕ್ಕೂಟದ ಮುಖ್ಯ ಪ್ರಾಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್, ನಿಯೋಗವು ಮಂಗಳವಾರ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.</p>.<p>‘ಸಿ’ ವರ್ಗದ 36 ಸಾವಿರ ದೇವಸ್ಥಾನಗಳ ಪೂಜಾ ಸಾಮಗ್ರಿಗಳು, ವಿದ್ಯುತ್ ವೆಚ್ಚ, ನಿತ್ಯ ಎರಡು ಬಾರಿ ಪೂಜೆ ಮಾಡಲು ಮುಜರಾಯಿ ಇಲಾಖೆ ಮೂಲಕ ಮಾಸಿಕ ₹6 ಸಾವಿರ ಹಣ ನೀಡಲಾಗುತ್ತಿದೆ. ಅದನ್ನು ₹10 ಸಾವಿರಕ್ಕೆ ಏರಿಸುವಂತೆ ಮನವಿ ಮಾಡಲಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳ ಪೂಜಾ ಸಾಮಗ್ರಿಗಳ ವೆಚ್ಚದಲ್ಲಿ ಶೇ 35ರಷ್ಟು ಪಾಲನ್ನು ಇಲಾಖೆ ಭರಿಸುತ್ತಿದೆ. ಅದನ್ನು ಶೇ 50ಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>