<p><strong>ಬೆಂಗಳೂರು</strong>: ಮುಜರಾಯಿ ಕಾನೂನು ತಿದ್ದುಪಡಿ ಮಸೂದೆಗೆ ರಾಜ್ಪಪಾಲರು ಒಪ್ಪಿಗೆ ನೀಡುವ ಮೂಲಕ ‘ಸಿ’ ಶ್ರೇಣಿಯ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಮನವಿ ಮಾಡಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಜರಾಯಿ ಕಾನೂನಿಗೆ ತಿದ್ದುಪಡಿ ಮಾಡಿದರೆ ಹೆಚ್ಚು ವರಮಾನ ಇರುವ ‘ಎ’ ಮತ್ತು ‘ಬಿ’ ಶ್ರೇಣಿಯ ದೇವಸ್ಥಾನಗಳ ಹೆಚ್ಚುವರಿ ಆದಾಯದ ಪಾಲು ‘ಸಿ’ ಶ್ರೇಣಿಯ ದೇವಸ್ಥಾನಗಳಿಗೆ ಸಿಗಲಿದ್ದು, ಈ ದೇವಸ್ಥಾನಗಳ ಅಭಿವೃದ್ಧಿಗೆ ಸಹಾಯವಾಗುತ್ತದೆ. ಆದರೆ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಯಾಕೆ ವಾಪಸ್ ಕಳುಹಿಸಿದರು ಎಂಬುದು ಗೊತ್ತಾಗುತ್ತಿಲ್ಲ’ ಎಂದು ತಿಳಿಸಿದರು.</p>.<p>ರಾಜ್ಯ ಪುರಾತತ್ವ ಇಲಾಖೆ ಮತ್ತು ಮುಜರಾಯಿ ಇಲಾಖೆಗಳು ಜಂಟಿಯಾಗಿ ಕಾಲಮಿತಿ ನಿಗದಿಪಡಿಸಿಕೊಂಡು ಐತಿಹಾಸಿಕ ದೇವಸ್ಥಾನಗಳ ಆಸ್ತಿಗಳ ಸರ್ವೇಕ್ಷಣೆ ನಡೆಸಬೇಕು. ಅವುಗಳ ಅಭಿವೃದ್ಧಿಗೆ ₹500 ಕೋಟಿ ಮೀಸಲಿಡಬೇಕು. ಮುಜರಾಯಿ ದೇವಸ್ಥಾನಗಳಿಗೆ ಸಂಬಂಧಪಟ್ಟ ಸುಮಾರು ಒಂದು ಲಕ್ಷ ಎಕರೆ ವಿಸ್ತೀರ್ಣದ ಜಮೀನುಗಳನ್ನು ಪಟ್ಟಭದ್ರರು ಅತಿಕ್ರಮಣ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿಯೂ ದೇವಸ್ಥಾನಗಳ ಬೆಲೆ ಬಾಳುವ ಜಮೀನು ಬಲಿಷ್ಠರ ಕೈಯಲ್ಲಿದೆ. ಎ.ಟಿ. ರಾಮಸ್ವಾಮಿ ವರದಿಯನ್ನು ಅನುಷ್ಠಾನಕ್ಕೆ ತರುವ ಮೂಲಕ ಆ ಜಮೀನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಅರ್ಚಕರು, ಉದ್ಯೋಗಿಗಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ನೀತಿ ರೂಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿರುವ ದೇವಸ್ಥಾನಗಳಲ್ಲಿ ಅರ್ಚಕರಿಗೆ ವಸತಿ ನಿರ್ಮಿಸಿಕೊಡಬೇಕು. ದೇವಸ್ಥಾನಗಳ ಪಕ್ಕದಲ್ಲಿ ಸ್ನಾನಗೃಹ, ಶೌಚಾಲಯ ನಿರ್ಮಿಸಬೇಕು. ಆಗಮ, ಆಚರಣೆ, ಮತ್ತು ನಿರ್ವಹಣೆಗಾಗಿ ತರಬೇತಿ ನೀಡಬೇಕು. ಪೂಜಾದ್ರವ್ಯಗಳ ನಿರ್ವಹಣೆಗಾಗಿ ತಿಂಗಳಿಗೆ ₹5,000 ನೀಡಬೇಕು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಶಾಮಾಚಾರ್, ಶ್ಯಾಮಸುಂದರ್, ಉಮೇಶ್ ಶರ್ಮ, ಸಂಪರ್ಕಾಧಿಕಾರಿ ಗಾಯತ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಜರಾಯಿ ಕಾನೂನು ತಿದ್ದುಪಡಿ ಮಸೂದೆಗೆ ರಾಜ್ಪಪಾಲರು ಒಪ್ಪಿಗೆ ನೀಡುವ ಮೂಲಕ ‘ಸಿ’ ಶ್ರೇಣಿಯ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಮನವಿ ಮಾಡಿದೆ.</p>.<p>ಒಕ್ಕೂಟದ ಅಧ್ಯಕ್ಷ ಕೆ.ಇ. ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಜರಾಯಿ ಕಾನೂನಿಗೆ ತಿದ್ದುಪಡಿ ಮಾಡಿದರೆ ಹೆಚ್ಚು ವರಮಾನ ಇರುವ ‘ಎ’ ಮತ್ತು ‘ಬಿ’ ಶ್ರೇಣಿಯ ದೇವಸ್ಥಾನಗಳ ಹೆಚ್ಚುವರಿ ಆದಾಯದ ಪಾಲು ‘ಸಿ’ ಶ್ರೇಣಿಯ ದೇವಸ್ಥಾನಗಳಿಗೆ ಸಿಗಲಿದ್ದು, ಈ ದೇವಸ್ಥಾನಗಳ ಅಭಿವೃದ್ಧಿಗೆ ಸಹಾಯವಾಗುತ್ತದೆ. ಆದರೆ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಯಾಕೆ ವಾಪಸ್ ಕಳುಹಿಸಿದರು ಎಂಬುದು ಗೊತ್ತಾಗುತ್ತಿಲ್ಲ’ ಎಂದು ತಿಳಿಸಿದರು.</p>.<p>ರಾಜ್ಯ ಪುರಾತತ್ವ ಇಲಾಖೆ ಮತ್ತು ಮುಜರಾಯಿ ಇಲಾಖೆಗಳು ಜಂಟಿಯಾಗಿ ಕಾಲಮಿತಿ ನಿಗದಿಪಡಿಸಿಕೊಂಡು ಐತಿಹಾಸಿಕ ದೇವಸ್ಥಾನಗಳ ಆಸ್ತಿಗಳ ಸರ್ವೇಕ್ಷಣೆ ನಡೆಸಬೇಕು. ಅವುಗಳ ಅಭಿವೃದ್ಧಿಗೆ ₹500 ಕೋಟಿ ಮೀಸಲಿಡಬೇಕು. ಮುಜರಾಯಿ ದೇವಸ್ಥಾನಗಳಿಗೆ ಸಂಬಂಧಪಟ್ಟ ಸುಮಾರು ಒಂದು ಲಕ್ಷ ಎಕರೆ ವಿಸ್ತೀರ್ಣದ ಜಮೀನುಗಳನ್ನು ಪಟ್ಟಭದ್ರರು ಅತಿಕ್ರಮಣ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿಯೂ ದೇವಸ್ಥಾನಗಳ ಬೆಲೆ ಬಾಳುವ ಜಮೀನು ಬಲಿಷ್ಠರ ಕೈಯಲ್ಲಿದೆ. ಎ.ಟಿ. ರಾಮಸ್ವಾಮಿ ವರದಿಯನ್ನು ಅನುಷ್ಠಾನಕ್ಕೆ ತರುವ ಮೂಲಕ ಆ ಜಮೀನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಅರ್ಚಕರು, ಉದ್ಯೋಗಿಗಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ನೀತಿ ರೂಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿರುವ ದೇವಸ್ಥಾನಗಳಲ್ಲಿ ಅರ್ಚಕರಿಗೆ ವಸತಿ ನಿರ್ಮಿಸಿಕೊಡಬೇಕು. ದೇವಸ್ಥಾನಗಳ ಪಕ್ಕದಲ್ಲಿ ಸ್ನಾನಗೃಹ, ಶೌಚಾಲಯ ನಿರ್ಮಿಸಬೇಕು. ಆಗಮ, ಆಚರಣೆ, ಮತ್ತು ನಿರ್ವಹಣೆಗಾಗಿ ತರಬೇತಿ ನೀಡಬೇಕು. ಪೂಜಾದ್ರವ್ಯಗಳ ನಿರ್ವಹಣೆಗಾಗಿ ತಿಂಗಳಿಗೆ ₹5,000 ನೀಡಬೇಕು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಶಾಮಾಚಾರ್, ಶ್ಯಾಮಸುಂದರ್, ಉಮೇಶ್ ಶರ್ಮ, ಸಂಪರ್ಕಾಧಿಕಾರಿ ಗಾಯತ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>