<p><strong>ಬೆಂಗಳೂರು: ‘</strong>ಮೈಸೂರು ಸುತ್ತಮುತ್ತಲಿನ ಪ್ರದೇಶಗಳನ್ನು ನಗರ ವ್ಯಾಪ್ತಿಗೆ ತಂದು ಸಮಗ್ರ ಅಭಿವೃದ್ಧಿ ಸಾಧಿಸಲು ‘ನವ ಮೈಸೂರು ನಿರ್ಮಾಣ ಯೋಜನೆ’ ರೂಪಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.</p>.<p>ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜತೆಗೆ ಗುರುವಾರ ನಡೆಸಿದ ಸಭೆಯಲ್ಲಿ ಅವರು ಈ ವಿಚಾರ ಕುರಿತು ಚರ್ಚಿಸಿದರು. </p>.<p>‘ಬೆಂಗಳೂರಿನಂತೆಯೇ ಮೈಸೂರು ಸಹ ವೇಗವಾಗಿ ಬೆಳೆಯುತ್ತಿರುವ ನಗರ. ಇಲ್ಲಿ ಐಟಿ, ಬಿಟಿ, ಕೈಗಾರಿಕೆಗಳು ಮತ್ತು ವಸತಿ ಯೋಜನೆಗಳು ಹೆಚ್ಚಾಗುತ್ತಿವೆ. ಜತೆಗೆ ನಗರವೂ ವಿಸ್ತರಣೆಯಾಗುತ್ತಿದೆ. ಇದಕ್ಕೆ ಪೂರಕವಾಗಿ ಸಮಗ್ರ ಯೋಜನೆ ರೂಪಿಸಲು ನಮ್ಮ ಸರ್ಕಾರ ಗಮನ ಹರಿಸಿದೆ’ ಎಂದು ಹೇಳಿದರು.</p>.<p>‘ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಯೋಚನೆ ಇದೆ. ಹೀಗಾಗಿ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಉದ್ಯಮಗಳನ್ನು ಆಕರ್ಷಿಸಲು ತ್ವರಿತ ಭೂಮಿ ಹಂಚಿಕೆ, ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು’ ಎಂದು ತಿಳಿಸಿದರು.</p>.<p> <strong>- ಐದು ಆಯಾಮದ ಅಭಿವೃದ್ಧಿ ಉದ್ಯಮ</strong> </p><p>ಮೈಸೂರು: ಅತ್ಯಾಧುನಿಕ ಕೈಗಾರಿಕಾ ಮತ್ತು ಉತ್ಪಾದನಾ ಹಬ್ ಸ್ಥಾಪನೆ ನಿಪುಣ ಮೈಸೂರು: ಕೌಶಲ ಅಭಿವೃದ್ಧಿ ಮತ್ತು ಕೌಶಲಾಧಾರಿತ ಉದ್ಯೋಗ ಸೃಷ್ಟಿಗೆ ಒತ್ತು ಸುಖೀವಾಸ ಮೈಸೂರು: ಸುಸಜ್ಜಿತವಾದ ಸಮಗ್ರ ಟೆಕ್ ಸಿಟಿ ನಿರ್ಮಾಣ ಪ್ರವಾಸೋದ್ಯಮ ಮೈಸೂರು: ಪ್ರವಾಸೋದ್ಯಮದ ಭಾಗವಾಗಿ ಸಮಗ್ರ ಆರೋಗ್ಯ ಕ್ಷೇಮ ಮತ್ತು ಪುನಶ್ಚೇತನ ಕೇಂದ್ರ ಆರಂಭ ಸಂಚಾರ ಮೈಸೂರು: ರ್ಯಾಪಿಡ್ ಮೆಟ್ರೊ ಯೋಜನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಮೈಸೂರು ಸುತ್ತಮುತ್ತಲಿನ ಪ್ರದೇಶಗಳನ್ನು ನಗರ ವ್ಯಾಪ್ತಿಗೆ ತಂದು ಸಮಗ್ರ ಅಭಿವೃದ್ಧಿ ಸಾಧಿಸಲು ‘ನವ ಮೈಸೂರು ನಿರ್ಮಾಣ ಯೋಜನೆ’ ರೂಪಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.</p>.<p>ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜತೆಗೆ ಗುರುವಾರ ನಡೆಸಿದ ಸಭೆಯಲ್ಲಿ ಅವರು ಈ ವಿಚಾರ ಕುರಿತು ಚರ್ಚಿಸಿದರು. </p>.<p>‘ಬೆಂಗಳೂರಿನಂತೆಯೇ ಮೈಸೂರು ಸಹ ವೇಗವಾಗಿ ಬೆಳೆಯುತ್ತಿರುವ ನಗರ. ಇಲ್ಲಿ ಐಟಿ, ಬಿಟಿ, ಕೈಗಾರಿಕೆಗಳು ಮತ್ತು ವಸತಿ ಯೋಜನೆಗಳು ಹೆಚ್ಚಾಗುತ್ತಿವೆ. ಜತೆಗೆ ನಗರವೂ ವಿಸ್ತರಣೆಯಾಗುತ್ತಿದೆ. ಇದಕ್ಕೆ ಪೂರಕವಾಗಿ ಸಮಗ್ರ ಯೋಜನೆ ರೂಪಿಸಲು ನಮ್ಮ ಸರ್ಕಾರ ಗಮನ ಹರಿಸಿದೆ’ ಎಂದು ಹೇಳಿದರು.</p>.<p>‘ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಯೋಚನೆ ಇದೆ. ಹೀಗಾಗಿ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಉದ್ಯಮಗಳನ್ನು ಆಕರ್ಷಿಸಲು ತ್ವರಿತ ಭೂಮಿ ಹಂಚಿಕೆ, ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು’ ಎಂದು ತಿಳಿಸಿದರು.</p>.<p> <strong>- ಐದು ಆಯಾಮದ ಅಭಿವೃದ್ಧಿ ಉದ್ಯಮ</strong> </p><p>ಮೈಸೂರು: ಅತ್ಯಾಧುನಿಕ ಕೈಗಾರಿಕಾ ಮತ್ತು ಉತ್ಪಾದನಾ ಹಬ್ ಸ್ಥಾಪನೆ ನಿಪುಣ ಮೈಸೂರು: ಕೌಶಲ ಅಭಿವೃದ್ಧಿ ಮತ್ತು ಕೌಶಲಾಧಾರಿತ ಉದ್ಯೋಗ ಸೃಷ್ಟಿಗೆ ಒತ್ತು ಸುಖೀವಾಸ ಮೈಸೂರು: ಸುಸಜ್ಜಿತವಾದ ಸಮಗ್ರ ಟೆಕ್ ಸಿಟಿ ನಿರ್ಮಾಣ ಪ್ರವಾಸೋದ್ಯಮ ಮೈಸೂರು: ಪ್ರವಾಸೋದ್ಯಮದ ಭಾಗವಾಗಿ ಸಮಗ್ರ ಆರೋಗ್ಯ ಕ್ಷೇಮ ಮತ್ತು ಪುನಶ್ಚೇತನ ಕೇಂದ್ರ ಆರಂಭ ಸಂಚಾರ ಮೈಸೂರು: ರ್ಯಾಪಿಡ್ ಮೆಟ್ರೊ ಯೋಜನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>