ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ಸಿಂಗ್ ಪುರಿ ಅವರು ನಾಯಂಡಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಮಾರ್ಗಕ್ಕೆ ಚಾಲನೆ ನೀಡುವರು. ನಂತರ ಕೆಂಗೇರಿ ಬಸ್ ಟರ್ಮಿನಲ್ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.