<p><strong>ಬೆಂಗಳೂರು:</strong> ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ (ಕೆಎಸ್ಐಸಿ) ವತಿಯಿಂದ ಏರ್ಪಡಿಸಿದ್ದ ‘ಮೈಸೂರು ಸಿಲ್ಕ್ ವಿಂಟೇಜ್ ಸಾರಿ’ಸ್ಪರ್ಧೆಯಲ್ಲಿ ಪದ್ಮಾವತಿ ಸುಬ್ಬಣ್ಣ ಹಾಗೂ ಬಿ.ಆರ್.ಶರ್ಮಿಳಾ ಅವರು ವಿಜೇತರಾದರು.</p>.<p>ಬಹುಮಾನ ಪಡೆದ ಮಹಿಳೆಯರಿಬ್ಬರಿಗೂ ₹18 ಸಾವಿರ ಮೊತ್ತದ ಚೆಕ್ ಹಾಗೂ ಟ್ರೋಫಿ ನೀಡಲಾಯಿತು. ಜೊತೆಗೆ ಐದು ಮಂದಿಗೆ ₹ 5 ಸಾವಿರ ಮೊತ್ತದ ಸಮಾಧಾನಕರ ಬಹುಮಾನವನ್ನೂ ನೀಡಲಾಯಿತು.</p>.<p>ಬುಧವಾರದಿಂದ ಶೇ 25ರ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳ ಮಾರಾಟ ಆರಂಭವಾಗಿದೆ. ಹಬ್ಬದ ಪ್ರಯುಕ್ತ ಅಕ್ಟೋಬರ್ 17ರವರೆಗೆ ಮಾರಾಟ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ (ಕೆಎಸ್ಐಸಿ) ವತಿಯಿಂದ ಏರ್ಪಡಿಸಿದ್ದ ‘ಮೈಸೂರು ಸಿಲ್ಕ್ ವಿಂಟೇಜ್ ಸಾರಿ’ಸ್ಪರ್ಧೆಯಲ್ಲಿ ಪದ್ಮಾವತಿ ಸುಬ್ಬಣ್ಣ ಹಾಗೂ ಬಿ.ಆರ್.ಶರ್ಮಿಳಾ ಅವರು ವಿಜೇತರಾದರು.</p>.<p>ಬಹುಮಾನ ಪಡೆದ ಮಹಿಳೆಯರಿಬ್ಬರಿಗೂ ₹18 ಸಾವಿರ ಮೊತ್ತದ ಚೆಕ್ ಹಾಗೂ ಟ್ರೋಫಿ ನೀಡಲಾಯಿತು. ಜೊತೆಗೆ ಐದು ಮಂದಿಗೆ ₹ 5 ಸಾವಿರ ಮೊತ್ತದ ಸಮಾಧಾನಕರ ಬಹುಮಾನವನ್ನೂ ನೀಡಲಾಯಿತು.</p>.<p>ಬುಧವಾರದಿಂದ ಶೇ 25ರ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳ ಮಾರಾಟ ಆರಂಭವಾಗಿದೆ. ಹಬ್ಬದ ಪ್ರಯುಕ್ತ ಅಕ್ಟೋಬರ್ 17ರವರೆಗೆ ಮಾರಾಟ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>