<p><strong>ಬೆಂಗಳೂರು:</strong> ಶ್ರೀ ರಾಮಸೇವಾ ಮಂಡಳಿ, ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ದ ಪ್ರಯುಕ್ತ ನೀಡುವ ‘ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ’ಗೆ ಪಿಟೀಲು ವಾದಕರಾದ ಮೈಸೂರು ನಾಗರಾಜ್ ಮತ್ತು ಮೈಸೂರು ಮಂಜುನಾಥ್ ಆಯ್ಕೆಯಾಗಿದ್ದಾರೆ. </p>.<p>ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕುಟುಂಬದ ಸದಸ್ಯರು ಟ್ರಸ್ಟ್ನಲ್ಲಿ ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಏ.18ರಂದು ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. </p>.<p>ಟ್ರಸ್ಟ್ ಮಾರ್ಚ್ 27ರಿಂದ ಏಪ್ರಿಲ್ 22ರವರೆಗೆ ಚಾಮರಾಜಪೇಟೆಯ ಕೋಟೆ ಪ್ರೌಢಶಾಲೆ ಆವರಣದಲ್ಲಿ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ ಹಮ್ಮಿಕೊಂಡಿದೆ. ಈ ಉತ್ಸವದ ಭಾಗವಾಗಿ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಎಸ್.ಎನ್. ವರದರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶ್ರೀ ರಾಮಸೇವಾ ಮಂಡಳಿ, ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ದ ಪ್ರಯುಕ್ತ ನೀಡುವ ‘ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ’ಗೆ ಪಿಟೀಲು ವಾದಕರಾದ ಮೈಸೂರು ನಾಗರಾಜ್ ಮತ್ತು ಮೈಸೂರು ಮಂಜುನಾಥ್ ಆಯ್ಕೆಯಾಗಿದ್ದಾರೆ. </p>.<p>ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕುಟುಂಬದ ಸದಸ್ಯರು ಟ್ರಸ್ಟ್ನಲ್ಲಿ ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಏ.18ರಂದು ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. </p>.<p>ಟ್ರಸ್ಟ್ ಮಾರ್ಚ್ 27ರಿಂದ ಏಪ್ರಿಲ್ 22ರವರೆಗೆ ಚಾಮರಾಜಪೇಟೆಯ ಕೋಟೆ ಪ್ರೌಢಶಾಲೆ ಆವರಣದಲ್ಲಿ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ ಹಮ್ಮಿಕೊಂಡಿದೆ. ಈ ಉತ್ಸವದ ಭಾಗವಾಗಿ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಎಸ್.ಎನ್. ವರದರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>