<p><strong>ಬೆಂಗಳೂರು</strong>: ‘ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳು ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ಮೇಲಿನ ಆರ್ಥಿಕ ಹೊರೆ ಇಳಿಸಿವೆ’ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅಭಿಮತ ವ್ಯಕ್ತಪಡಿಸಿದರು. </p>.<p>ಶ್ರೀ ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳು ಇರದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿತ್ತು. ರಾಜ್ಯದಲ್ಲಿ 364 ಸಹಕಾರಿ ಬ್ಯಾಂಕ್ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ 1,200 ಶಾಖೆಗಳಿವೆ. ಲಕ್ಷಾಂತರ ಮಂದಿ ಈ ಬ್ಯಾಂಕುಗಳಲ್ಲಿ ಸಕ್ರಿಯವಾಗಿದ್ದು, ಜನರ ಜೀವನಮಟ್ಟ ಸುಧಾರಣೆಗೆ ಬ್ಯಾಂಕ್ಗಳು ನೆರವಾಗುತ್ತಿವೆ. ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಆರ್. ವೆಂಕಟೇಶ್, ‘ನಮ್ಮ ಬ್ಯಾಂಕ್ 14 ಶಾಖೆಗಳನ್ನು ಹೊಂದಿದ್ದು, ₹6 ಸಾವಿರ ಕೋಟಿ ವಹಿವಾಟು ನಡೆಸಲಾಗುತ್ತಿದೆ. ₹125 ಕೋಟಿ ಸ್ವಂತ ಬಂಡವಾಳ ಹೊಂದಲಾಗಿದೆ. ಸುಮಾರು 25 ಸಾವಿರ ಸದಸ್ಯರಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸರಿಸಮಾನವಾಗಿ ಕೆಲಸ ಮಾಡಲಾಗುತ್ತಿದೆ. ಬ್ಯಾಂಕಿಂಗ್ ವ್ಯವಹಾರ ಸುಲಭಗೊಳಿಸಲು ಆಧುನಿಕ ತಂತ್ರಜ್ಞಾನಗಳನ್ನೂ ಅಳವಡಿಸಿಕೊಳ್ಳಲಾಗಿದೆ. ಸಹಕಾರಿ ಸಂತೆ ಪ್ರಾರಂಭಿಸಿ, ಸಣ್ಣ ಉದ್ದಿಮೆದಾರರಿಗೆ ಸಾಲ ನೀಡಲು ವೇದಿಕೆ ಒದಗಿಸಿದ್ದೇವೆ’ ಎಂದರು. </p>.<p>ಸಹಕಾರಿ ಬ್ಯಾಂಕ್ಗಳು ಸಂಕಷ್ಟಕ್ಕೆ ಸಿಲುಕಿದಾಗ ಬಲಪಡಿಸಲು ಪ್ರತ್ಯೇಕ ಸಂಘ ಸ್ಥಾಪನೆ, ಠೇವಣಿ ವಿಮಾ ಮಿತಿ ₹10 ಲಕ್ಷಕ್ಕೆ ಏರಿಕೆ ಸೇರಿ ಸಹಕಾರಿ ಬ್ಯಾಂಕ್ಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಎಂ.ಆರ್. ವೆಂಕಟೇಶ್, ಮನವಿಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ನ ಕೇಂದ್ರ ಮಂಡಳಿಯ ನಿರ್ದೇಶಕ ಸತೀಶ್ ಮರಾಠೆ ಅವರಿಗೆ ಹಸ್ತಾಂತರಿಸಿದರು.</p>.<p>ಇದೇ ಸಮಾರಂಭದಲ್ಲಿ ತಿಪಟೂರಿನ ‘ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್’ಗೆ ‘ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ, ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ನ ವ್ಯವಸ್ಥಾಪಕ ಉಮೇಶ್ ಹಾಗೂ ದಿ ಗಾಂಧಿ ಗುಂಜ್ ಕೋ–ಆಪರೇಟಿವ್ ಬ್ಯಾಂಕ್ನ ವ್ಯವಸ್ಥಾಪಕಿ ವಾಣಿ ಬಿರಾದರ್ ಅವರಿಗೆ ‘ಅತ್ಯುತ್ತಮ ಸಿಬ್ಬಂದಿ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಗಳು ಕ್ರಮವಾಗಿ ₹25 ಸಾವಿರ ಹಾಗೂ ₹10 ಸಾವಿರ ನಗದು ಒಳಗೊಂಡಿವೆ. </p>.<div><blockquote>ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಂಬಿಕೆಯೇ ಮುಖ್ಯ. ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.</blockquote><span class="attribution">ಆರ್. ಅಶೋಕ , ವಿಧಾನಸಭೆ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳು ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ಮೇಲಿನ ಆರ್ಥಿಕ ಹೊರೆ ಇಳಿಸಿವೆ’ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅಭಿಮತ ವ್ಯಕ್ತಪಡಿಸಿದರು. </p>.<p>ಶ್ರೀ ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸಹಕಾರಿ ಬ್ಯಾಂಕ್ ಮತ್ತು ಸಹಕಾರಿ ಸಂಘಗಳು ಇರದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿತ್ತು. ರಾಜ್ಯದಲ್ಲಿ 364 ಸಹಕಾರಿ ಬ್ಯಾಂಕ್ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ 1,200 ಶಾಖೆಗಳಿವೆ. ಲಕ್ಷಾಂತರ ಮಂದಿ ಈ ಬ್ಯಾಂಕುಗಳಲ್ಲಿ ಸಕ್ರಿಯವಾಗಿದ್ದು, ಜನರ ಜೀವನಮಟ್ಟ ಸುಧಾರಣೆಗೆ ಬ್ಯಾಂಕ್ಗಳು ನೆರವಾಗುತ್ತಿವೆ. ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಆರ್. ವೆಂಕಟೇಶ್, ‘ನಮ್ಮ ಬ್ಯಾಂಕ್ 14 ಶಾಖೆಗಳನ್ನು ಹೊಂದಿದ್ದು, ₹6 ಸಾವಿರ ಕೋಟಿ ವಹಿವಾಟು ನಡೆಸಲಾಗುತ್ತಿದೆ. ₹125 ಕೋಟಿ ಸ್ವಂತ ಬಂಡವಾಳ ಹೊಂದಲಾಗಿದೆ. ಸುಮಾರು 25 ಸಾವಿರ ಸದಸ್ಯರಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸರಿಸಮಾನವಾಗಿ ಕೆಲಸ ಮಾಡಲಾಗುತ್ತಿದೆ. ಬ್ಯಾಂಕಿಂಗ್ ವ್ಯವಹಾರ ಸುಲಭಗೊಳಿಸಲು ಆಧುನಿಕ ತಂತ್ರಜ್ಞಾನಗಳನ್ನೂ ಅಳವಡಿಸಿಕೊಳ್ಳಲಾಗಿದೆ. ಸಹಕಾರಿ ಸಂತೆ ಪ್ರಾರಂಭಿಸಿ, ಸಣ್ಣ ಉದ್ದಿಮೆದಾರರಿಗೆ ಸಾಲ ನೀಡಲು ವೇದಿಕೆ ಒದಗಿಸಿದ್ದೇವೆ’ ಎಂದರು. </p>.<p>ಸಹಕಾರಿ ಬ್ಯಾಂಕ್ಗಳು ಸಂಕಷ್ಟಕ್ಕೆ ಸಿಲುಕಿದಾಗ ಬಲಪಡಿಸಲು ಪ್ರತ್ಯೇಕ ಸಂಘ ಸ್ಥಾಪನೆ, ಠೇವಣಿ ವಿಮಾ ಮಿತಿ ₹10 ಲಕ್ಷಕ್ಕೆ ಏರಿಕೆ ಸೇರಿ ಸಹಕಾರಿ ಬ್ಯಾಂಕ್ಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಎಂ.ಆರ್. ವೆಂಕಟೇಶ್, ಮನವಿಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ನ ಕೇಂದ್ರ ಮಂಡಳಿಯ ನಿರ್ದೇಶಕ ಸತೀಶ್ ಮರಾಠೆ ಅವರಿಗೆ ಹಸ್ತಾಂತರಿಸಿದರು.</p>.<p>ಇದೇ ಸಮಾರಂಭದಲ್ಲಿ ತಿಪಟೂರಿನ ‘ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್’ಗೆ ‘ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ, ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ನ ವ್ಯವಸ್ಥಾಪಕ ಉಮೇಶ್ ಹಾಗೂ ದಿ ಗಾಂಧಿ ಗುಂಜ್ ಕೋ–ಆಪರೇಟಿವ್ ಬ್ಯಾಂಕ್ನ ವ್ಯವಸ್ಥಾಪಕಿ ವಾಣಿ ಬಿರಾದರ್ ಅವರಿಗೆ ‘ಅತ್ಯುತ್ತಮ ಸಿಬ್ಬಂದಿ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಗಳು ಕ್ರಮವಾಗಿ ₹25 ಸಾವಿರ ಹಾಗೂ ₹10 ಸಾವಿರ ನಗದು ಒಳಗೊಂಡಿವೆ. </p>.<div><blockquote>ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಂಬಿಕೆಯೇ ಮುಖ್ಯ. ತ್ಯಾಗರಾಜ ಕೋ–ಆಪರೇಟಿವ್ ಬ್ಯಾಂಕ್ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.</blockquote><span class="attribution">ಆರ್. ಅಶೋಕ , ವಿಧಾನಸಭೆ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>