ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಡಾ. ಎಲ್. ಗೋಮತೀದೇವಿ ಅವರು ಉಪಾಧ್ಯಕ್ಷತೆ ವಹಿಸಿದ್ದಾರೆ. ವಿಭು ಅಕಾಡೆಮಿ ಅಧ್ಯಕ್ಷರಾದ ಡಾ. ಆರತಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ‘ಭಾರತೀಯ ಚಿಂತನೆಯಲ್ಲಿ ಮಹಿಳೆ’ ವಿಚಾರ ಸಂಕಿರಣ, ‘ಸ್ಥಾನೀಯ ಮಹಿಳೆಯರ ಸ್ಥಿತಿ, ಸವಾಲುಗಳು ಹಾಗೂ ಪರಿಹಾರ’ ಹಾಗೂ ‘ಆಧುನಿಕ ಭಾರತ ವಿಕಾಸದಲ್ಲಿ ಮಹಿಳೆಯರ ಪಾತ್ರ’ ಚರ್ಚಾಗೋಷ್ಠಿಗಳು ನಡೆಯಲಿವೆ. ಸಮಾರೋಪದಲ್ಲಿ ಮಾಜಿ ಶಾಸಕಿ ಡಾ.ಎಸ್.ಆರ್. ಲೀಲಾ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.