<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ಬಡಾವಣೆಗೆ (ಎನ್ಕೆಪಿಎಲ್) ಮೂಲಸೌಲಭ್ಯಗಳನ್ನು ಒದಗಿಸಿರುವ ಕುರಿತು ಎರಡೂವರೆ ವರ್ಷಗಳ ಬಳಿಕ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ–ರೇರಾ) ವಿಚಾರಣೆ ನಡೆಸಿತು.</p>.<p>ಬಡಾವಣೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಿರುದ್ಧ ರೇರಾಗೆ ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ದೂರು ನೀಡಿದೆ.</p>.<p>ರೇರಾ ಅಧ್ಯಕ್ಷ ರಾಕೇಶ್ ಸಿಂಗ್ ಮಾತನಾಡಿ, ‘ಈಗಾಗಲೇ ಬಿಡಿಎ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ನಿವೇಶನದ ಮಾಲೀಕರು ಸೌಕರ್ಯ ಪಡೆಯಲು ರೇರಾಕ್ಕೆ ಬರುವಂತೆ ಮಾಡಿದೆ’ ಎಂದು ಹೇಳಿದರು.</p>.<p>‘ಶೀಘ್ರವೇ ಮೂಲಸೌಕರ್ಯ ಒದಗಿಸಲಾಗುವುದು’ ಎಂಬ ಬಿಡಿಎ ಎಂಜಿನಿಯರ್ಗಳ ಉತ್ತರಕ್ಕೆ ಅಸಮಾಧಾನಗೊಂಡ ಅಧ್ಯಕ್ಷರು, ‘ಯೋಜನೆ ಯಾವಾಗ ಪೂರ್ಣಗೊಳ್ಳಲಿದೆ ಎಂಬುದರ ಬಗ್ಗೆ ಸಂಪೂರ್ಣ ವಿವರಗಳೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು’ ಎಂದು ಹೇಳಿದರು.</p>.<p>ಏಪ್ರಿಲ್ 9ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p>ಬಿಡಿಎ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ಬಡಾವಣೆಗೆ (ಎನ್ಕೆಪಿಎಲ್) ಮೂಲಸೌಲಭ್ಯಗಳನ್ನು ಒದಗಿಸಿರುವ ಕುರಿತು ಎರಡೂವರೆ ವರ್ಷಗಳ ಬಳಿಕ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ–ರೇರಾ) ವಿಚಾರಣೆ ನಡೆಸಿತು.</p>.<p>ಬಡಾವಣೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಿರುದ್ಧ ರೇರಾಗೆ ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ದೂರು ನೀಡಿದೆ.</p>.<p>ರೇರಾ ಅಧ್ಯಕ್ಷ ರಾಕೇಶ್ ಸಿಂಗ್ ಮಾತನಾಡಿ, ‘ಈಗಾಗಲೇ ಬಿಡಿಎ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ನಿವೇಶನದ ಮಾಲೀಕರು ಸೌಕರ್ಯ ಪಡೆಯಲು ರೇರಾಕ್ಕೆ ಬರುವಂತೆ ಮಾಡಿದೆ’ ಎಂದು ಹೇಳಿದರು.</p>.<p>‘ಶೀಘ್ರವೇ ಮೂಲಸೌಕರ್ಯ ಒದಗಿಸಲಾಗುವುದು’ ಎಂಬ ಬಿಡಿಎ ಎಂಜಿನಿಯರ್ಗಳ ಉತ್ತರಕ್ಕೆ ಅಸಮಾಧಾನಗೊಂಡ ಅಧ್ಯಕ್ಷರು, ‘ಯೋಜನೆ ಯಾವಾಗ ಪೂರ್ಣಗೊಳ್ಳಲಿದೆ ಎಂಬುದರ ಬಗ್ಗೆ ಸಂಪೂರ್ಣ ವಿವರಗಳೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು’ ಎಂದು ಹೇಳಿದರು.</p>.<p>ಏಪ್ರಿಲ್ 9ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p>ಬಿಡಿಎ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>