<p><strong>ಬೆಂಗಳೂರು: </strong>‘ಜಾತಿ ಪದ್ಧತಿಯ ಲಾಭ ಪಡೆದುಕೊಳ್ಳುತ್ತಿರುವ ಮೇಲ್ವರ್ಗದವರು ಈ ಪದ್ಧತಿ ಜೀವಂತವಾಗಿ ಇರಿಸುವ ತಂತ್ರಗಳನ್ನು ನಿರಂತರವಾಗಿ ಮುಂದುವರಿಸುತ್ತಿದ್ದಾರೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ‘ಜಾತಿ ದಮನ ವಿರೋಧಿಸಿ, ದಲಿತರ ಹಕ್ಕಗಳಿಗಾಗಿ’ ನಗರದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೆವರು ಸುರಿಸದೆ ಸಂಪತ್ತು ಪಡೆಯುುವುದನ್ನು ಮೇಲ್ಜಾತಿಯವರು ರೂಢಿಸಿಕೊಂಡಿದ್ದಾರೆ. ಅದಕ್ಕಾಗಿಯೇ ಈ ಪದ್ಧತಿ ಜೀವಂತ ಇರಬೇಕು ಎಂದು ಬಯಸುತ್ತಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹಗಲು–ರಾತ್ರಿ ದುಡಿದರೂ ಊಟ ಹೊಂದಿಸಿಕೊಳ್ಳಲು ಆಗದ ಸ್ಥಿತಿಯಲ್ಲಿ ಇದ್ದಾರೆ. ಬಡತನ, ಅನಾರೋಗ್ಯ, ಅನಕ್ಷರತೆ ಇಂದಿಗೂ ಅವರನ್ನು ಕಾಡುತ್ತಿದೆ. ಇದೆಲ್ಲದಕ್ಕೂ ಜಾತಿ ವ್ಯವಸ್ಥೆಯೇ ಕಾರಣ’ ಎಂದರು.</p>.<p>ಜಗತ್ತಿನ ಎಲ್ಲ ಧರ್ಮಗಳೂ ಭಾರತದಲ್ಲಿ ಇವೆ. 4,635 ಜಾತಿ ಮತ್ತು ಉಪಜಾತಿಗಳಿವೆ. ಅಂತರ್ಜಾತಿ ವಿವಾಹ, ಸಹಭೋಜನ ಇಂದಿಗೂ ಸಾಧ್ಯವಾಗುತ್ತಿಲ್ಲ. ಶವಸಂಸ್ಕಾರ ಬೇರೆ ಬೇರೆ ಸ್ಮಶಾನಗಳಲ್ಲಿ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಭಾರತದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಇತಿಹಾಸದ ಉದ್ದಕ್ಕೂ ಬುದ್ಧ, ಬಸವಣ್ಣ, ಪೆರಿಯಾರ್, ಜ್ಯೋತಿಬಾಯಿ ಫುಲೆ, ಅಂಬೇಡ್ಕರ್ ಸೇರಿ ಹಲವರು ಶ್ರಮಿಸಿದ್ದಾರೆ. ಸ್ವಾತಂತ್ರ್ಯ ನಂತರ ಅಂಬೇಡ್ಕರ್ ತಮ್ಮ ಇತಿಮಿತಿಗಳ ನಡುವೆ ಶೋಷಿತರಿಗೆ, ಹಿಂದುಳಿದವರಿಗೆ ಹಾಗೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದರು’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ಅಂತಹ ಸೌಲಭ್ಯಗಳಿಗೆ ಕಂಟಕವಾದ ನೀತಿ, ನಿಯಮಗಳನ್ನು ಸರ್ಕಾರಗಳು ಜಾರಿ ಮಾಡುತ್ತಿವೆ. ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಕೊಳಚೆ ನಿವಾಸಿಗಳು, ದೇವದಾಸಿ ಮಕ್ಕಳು ಮೀಸಲಾತಿ ಸೌಲಭ್ಯವನ್ನು ಇಂದಿಗೂ ಪಡೆಯಲು ಆಗಿಲ್ಲ. ಅವರಿಗೆ ಪ್ರಾಥಮಿಕ ಶಿಕ್ಷಣವೇ ದೊರೆತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಉದ್ದಿಮೆಗಳನ್ನು ಮುಚ್ಚಲಾಗುತ್ತಿದೆ. ಇದರ ಪರಿಣಾಮ ತಳ ಸಮುದಾಯಗಳ ಮೇಲೆ ಬೀರುತ್ತಿದೆ. ಮೀಸಲಾತಿ ಪರಿಕಲ್ಪನೆಯನ್ನು ಇವು ಬುಡಮೇಲು ಮಾಡುತ್ತಿವೆ. ಈ ರೀತಿಯ ಸಮಸ್ಯೆಗಳನ್ನು ಹುಡುಕಿ ಪರಿಹಾರ ಕಂಡುಕೊಳ್ಳಲು ಯುವಕರು ಮುಂದಾಗಬೇಕು‘ ಎಂದರು.</p>.<p>ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವೆಂಕಟ್, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್, ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಳಮ್ಮ, ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜಾತಿ ಪದ್ಧತಿಯ ಲಾಭ ಪಡೆದುಕೊಳ್ಳುತ್ತಿರುವ ಮೇಲ್ವರ್ಗದವರು ಈ ಪದ್ಧತಿ ಜೀವಂತವಾಗಿ ಇರಿಸುವ ತಂತ್ರಗಳನ್ನು ನಿರಂತರವಾಗಿ ಮುಂದುವರಿಸುತ್ತಿದ್ದಾರೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ‘ಜಾತಿ ದಮನ ವಿರೋಧಿಸಿ, ದಲಿತರ ಹಕ್ಕಗಳಿಗಾಗಿ’ ನಗರದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೆವರು ಸುರಿಸದೆ ಸಂಪತ್ತು ಪಡೆಯುುವುದನ್ನು ಮೇಲ್ಜಾತಿಯವರು ರೂಢಿಸಿಕೊಂಡಿದ್ದಾರೆ. ಅದಕ್ಕಾಗಿಯೇ ಈ ಪದ್ಧತಿ ಜೀವಂತ ಇರಬೇಕು ಎಂದು ಬಯಸುತ್ತಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಹಗಲು–ರಾತ್ರಿ ದುಡಿದರೂ ಊಟ ಹೊಂದಿಸಿಕೊಳ್ಳಲು ಆಗದ ಸ್ಥಿತಿಯಲ್ಲಿ ಇದ್ದಾರೆ. ಬಡತನ, ಅನಾರೋಗ್ಯ, ಅನಕ್ಷರತೆ ಇಂದಿಗೂ ಅವರನ್ನು ಕಾಡುತ್ತಿದೆ. ಇದೆಲ್ಲದಕ್ಕೂ ಜಾತಿ ವ್ಯವಸ್ಥೆಯೇ ಕಾರಣ’ ಎಂದರು.</p>.<p>ಜಗತ್ತಿನ ಎಲ್ಲ ಧರ್ಮಗಳೂ ಭಾರತದಲ್ಲಿ ಇವೆ. 4,635 ಜಾತಿ ಮತ್ತು ಉಪಜಾತಿಗಳಿವೆ. ಅಂತರ್ಜಾತಿ ವಿವಾಹ, ಸಹಭೋಜನ ಇಂದಿಗೂ ಸಾಧ್ಯವಾಗುತ್ತಿಲ್ಲ. ಶವಸಂಸ್ಕಾರ ಬೇರೆ ಬೇರೆ ಸ್ಮಶಾನಗಳಲ್ಲಿ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಭಾರತದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಇತಿಹಾಸದ ಉದ್ದಕ್ಕೂ ಬುದ್ಧ, ಬಸವಣ್ಣ, ಪೆರಿಯಾರ್, ಜ್ಯೋತಿಬಾಯಿ ಫುಲೆ, ಅಂಬೇಡ್ಕರ್ ಸೇರಿ ಹಲವರು ಶ್ರಮಿಸಿದ್ದಾರೆ. ಸ್ವಾತಂತ್ರ್ಯ ನಂತರ ಅಂಬೇಡ್ಕರ್ ತಮ್ಮ ಇತಿಮಿತಿಗಳ ನಡುವೆ ಶೋಷಿತರಿಗೆ, ಹಿಂದುಳಿದವರಿಗೆ ಹಾಗೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದರು’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ಅಂತಹ ಸೌಲಭ್ಯಗಳಿಗೆ ಕಂಟಕವಾದ ನೀತಿ, ನಿಯಮಗಳನ್ನು ಸರ್ಕಾರಗಳು ಜಾರಿ ಮಾಡುತ್ತಿವೆ. ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಕೊಳಚೆ ನಿವಾಸಿಗಳು, ದೇವದಾಸಿ ಮಕ್ಕಳು ಮೀಸಲಾತಿ ಸೌಲಭ್ಯವನ್ನು ಇಂದಿಗೂ ಪಡೆಯಲು ಆಗಿಲ್ಲ. ಅವರಿಗೆ ಪ್ರಾಥಮಿಕ ಶಿಕ್ಷಣವೇ ದೊರೆತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಉದ್ದಿಮೆಗಳನ್ನು ಮುಚ್ಚಲಾಗುತ್ತಿದೆ. ಇದರ ಪರಿಣಾಮ ತಳ ಸಮುದಾಯಗಳ ಮೇಲೆ ಬೀರುತ್ತಿದೆ. ಮೀಸಲಾತಿ ಪರಿಕಲ್ಪನೆಯನ್ನು ಇವು ಬುಡಮೇಲು ಮಾಡುತ್ತಿವೆ. ಈ ರೀತಿಯ ಸಮಸ್ಯೆಗಳನ್ನು ಹುಡುಕಿ ಪರಿಹಾರ ಕಂಡುಕೊಳ್ಳಲು ಯುವಕರು ಮುಂದಾಗಬೇಕು‘ ಎಂದರು.</p>.<p>ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವೆಂಕಟ್, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್, ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಳಮ್ಮ, ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>