‘ಬಸವಕಲ್ಯಾಣದಲ್ಲಿ ನಡೆದ ಉಪ ಚುನಾವಣಾ ಪ್ರಚಾರದ ವೇಳೆಯಲ್ಲೂ ಭವ್ಯಾ ಅವರಿಗೆ ಕಿರುಕುಳ ನೀಡಲಾಗಿದೆ. ದೆಹಲಿಯಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಆರೋಪಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡುವಂತೆ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಭವ್ಯಾ ದೂರಿನಲ್ಲಿ ಕೋರಿದ್ದಾರೆ’ ಎಂದೂ ಪೊಲೀಸರು ಹೇಳಿದರು.