ವಿಚಾರಣೆ ವೇಳೆ ನಲಪಾಡ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ‘ಅರ್ಜಿದಾರರಿಗೆ ಹೈಕೋರ್ಟ್ ಈ ಹಿಂದೆಯೇ ಜಾಮೀನು ಮಂಜೂರು ಮಾಡಿದೆ. ಆದರೆ, ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ವ್ಯಾಪ್ತಿ ಪ್ರದೇಶ ಬಿಟ್ಟು ಹೊರ ಹೋಗುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಅರ್ಜಿದಾರರು ಮೆಕ್ಕಾ ಯಾತ್ರೆಗೆ ತೆರಳಲು ಬಯಸಿದ್ದಾರೆ. ಆದ್ದರಿಂದ ಅದಕ್ಕೆ ಅನುಮತಿ ನೀಡಿ ಜಾಮೀನು ಷರತ್ತು ಸಡಿಲಗೊಳಿಸಬೇಕು’ ಎಂದು ಕೋರಿದರು.