<p><strong>ಬೆಂಗಳೂರು: </strong>ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ತಮ್ಮದೇ ಪಕ್ಷದ ದಲಿತ ಶಾಸಕರ ಪರ ನಿಲ್ಲದೇ, ಗಲಭೆ ನಡೆಸಿದ ಗೂಂಡಾಗಳ ಪರ ನಿಂತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ.</p>.<p>ಗಲಭೆ ಪೀಡಿತ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರದೇಶ ಮತ್ತು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್ನವರಿಗೆ ಸಾಮಾಜಿಕ ನ್ಯಾಯಕ್ಕಿಂತಲೂ ಅಲ್ಪಸಂಖ್ಯಾತರ ಓಲೈಕೆಯೇ ಮುಖ್ಯವಾಗಿದೆ ಎಂದು ಹೇಳಿದರು.</p>.<p>ವ್ಯವಸ್ಥಿತವಾಗಿ ಗಲಭೆ ನಡೆಸಲಾಗಿದೆ. ಸಾರ್ವಜನಿಕ ಆಸ್ತಿ–ಪಾಸ್ತಿ ನಾಶ ಮಾಡಿದ್ದು, ಇದರ ಹಿಂದೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ಇರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.</p>.<p>‘ಈ ಹಿಂದೆ ಪಾದರಾಯನಪುರದಲ್ಲಿ ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ನಡೆಸಿದವರು ಜೈಲಿನಿಂದ ಬಿಡುಗಡೆ ಆಗಿ ಬಂದಾಗ, ಹಾರ ಹಾಕಿ ಅವರನ್ನು ಸ್ವಾಗತಿಸಲಾಯಿತು. ಇದರಿಂದ ನೀವು ಹಲ್ಲೆ ಮಾಡಿ, ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಪ್ರೇರಣೆ ನೀಡಿದಂತಾಗಿದೆ’ ಎಂದರು.</p>.<p><strong>ಒಳಜಗಳವೇ ಕಾರಣ: ‘</strong>ಕಾಂಗ್ರೆಸ್ನ ಒಳಜಗಳ ಬೀದಿಗೆ ಬಂದು ಗಲಭೆಗೆ ಕಾರಣವಾಗಿದೆ. ಇದರಿಂದ ಬೆಂಗಳೂರಿಗೆ ಕಳಂಕ ತಟ್ಟಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ ದೂರಿದ್ದಾರೆ.</p>.<p>‘ಎಸ್ಡಿಪಿಐ, ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರುವಂತೆ ನಾವು ಮೊದಲಿನಿಂದಲೇ ಒತ್ತಾಯಿಸುತ್ತಾ ಬಂದಿದ್ದೇವೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಈ ಮಾತು ಏಕೆ ಹೇಳುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಸಿಎಂ ಭೇಟಿ ಮಾಡಿದ ಅಖಂಡ</strong><br />ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಮಾಡಿ, ‘ನನಗೂ ನನ್ನ ಕುಟುಂಬಕ್ಕೂ ರಕ್ಷಣೆ ನೀಡಬೇಕು. ಸರ್ಕಾರ ನನ್ನ ನೆರವಿಗೆ ಬಂದಿದೆ. ಅದೇ ರೀತಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನನ್ನ ನೆರವಿಗೆ ನಿಲ್ಲಬೇಕು’ ಎಂದು ಹೇಳಿದ್ದಾರೆ.</p>.<p>ತಮ್ಮ ಮನೆಯ ಸುತ್ತಮುತ್ತ ಹಲವು ಬಡಜನರ ಆಸ್ತಿಪಾಸ್ತಿಯನ್ನು ಗಲಭೆಕೋರರು ನಾಶ ಮಾಡಿದ್ದಾರೆ. ಸ್ವತ್ತು ಕಳೆದುಕೊಂಡಿರುವ ಬಡವರಿಗೆ ಪರಿಹಾರ ನೀಡುವಂತೆಯೂ ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ತಮ್ಮದೇ ಪಕ್ಷದ ದಲಿತ ಶಾಸಕರ ಪರ ನಿಲ್ಲದೇ, ಗಲಭೆ ನಡೆಸಿದ ಗೂಂಡಾಗಳ ಪರ ನಿಂತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ.</p>.<p>ಗಲಭೆ ಪೀಡಿತ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರದೇಶ ಮತ್ತು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್ನವರಿಗೆ ಸಾಮಾಜಿಕ ನ್ಯಾಯಕ್ಕಿಂತಲೂ ಅಲ್ಪಸಂಖ್ಯಾತರ ಓಲೈಕೆಯೇ ಮುಖ್ಯವಾಗಿದೆ ಎಂದು ಹೇಳಿದರು.</p>.<p>ವ್ಯವಸ್ಥಿತವಾಗಿ ಗಲಭೆ ನಡೆಸಲಾಗಿದೆ. ಸಾರ್ವಜನಿಕ ಆಸ್ತಿ–ಪಾಸ್ತಿ ನಾಶ ಮಾಡಿದ್ದು, ಇದರ ಹಿಂದೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ಇರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.</p>.<p>‘ಈ ಹಿಂದೆ ಪಾದರಾಯನಪುರದಲ್ಲಿ ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ನಡೆಸಿದವರು ಜೈಲಿನಿಂದ ಬಿಡುಗಡೆ ಆಗಿ ಬಂದಾಗ, ಹಾರ ಹಾಕಿ ಅವರನ್ನು ಸ್ವಾಗತಿಸಲಾಯಿತು. ಇದರಿಂದ ನೀವು ಹಲ್ಲೆ ಮಾಡಿ, ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಪ್ರೇರಣೆ ನೀಡಿದಂತಾಗಿದೆ’ ಎಂದರು.</p>.<p><strong>ಒಳಜಗಳವೇ ಕಾರಣ: ‘</strong>ಕಾಂಗ್ರೆಸ್ನ ಒಳಜಗಳ ಬೀದಿಗೆ ಬಂದು ಗಲಭೆಗೆ ಕಾರಣವಾಗಿದೆ. ಇದರಿಂದ ಬೆಂಗಳೂರಿಗೆ ಕಳಂಕ ತಟ್ಟಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ ದೂರಿದ್ದಾರೆ.</p>.<p>‘ಎಸ್ಡಿಪಿಐ, ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರುವಂತೆ ನಾವು ಮೊದಲಿನಿಂದಲೇ ಒತ್ತಾಯಿಸುತ್ತಾ ಬಂದಿದ್ದೇವೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಈ ಮಾತು ಏಕೆ ಹೇಳುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಸಿಎಂ ಭೇಟಿ ಮಾಡಿದ ಅಖಂಡ</strong><br />ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಮಾಡಿ, ‘ನನಗೂ ನನ್ನ ಕುಟುಂಬಕ್ಕೂ ರಕ್ಷಣೆ ನೀಡಬೇಕು. ಸರ್ಕಾರ ನನ್ನ ನೆರವಿಗೆ ಬಂದಿದೆ. ಅದೇ ರೀತಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನನ್ನ ನೆರವಿಗೆ ನಿಲ್ಲಬೇಕು’ ಎಂದು ಹೇಳಿದ್ದಾರೆ.</p>.<p>ತಮ್ಮ ಮನೆಯ ಸುತ್ತಮುತ್ತ ಹಲವು ಬಡಜನರ ಆಸ್ತಿಪಾಸ್ತಿಯನ್ನು ಗಲಭೆಕೋರರು ನಾಶ ಮಾಡಿದ್ದಾರೆ. ಸ್ವತ್ತು ಕಳೆದುಕೊಂಡಿರುವ ಬಡವರಿಗೆ ಪರಿಹಾರ ನೀಡುವಂತೆಯೂ ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>