ಇನ್ಸ್ಟಿಟ್ಯೂಟ್ ಅಧ್ಯಕ್ಷ ಕೆ. ಸುಕುಮಾರ್, ‘ಮೈಸೂರು ಸಂಸ್ಥಾನದ ದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, 1902ರಲ್ಲಿ ನಮ್ಮ ಸಂಸ್ಥೆಗೆ ಎರಡೂವರೆ ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದರು. ದೂರದೃಷ್ಟಿ ಹೊಂದಿದ್ದ ಅವರು ಕೈಗಾರಿಕೆ, ನೀರಾವರಿ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಿಗೆ ಅದ್ವಿತೀಯ ಕೊಡುಗೆ ನೀಡಿದ್ದಾರೆ’ ಎಂದು ಹೇಳಿದರು.