ಸಮಾನ ಮನಸ್ಕರು ಡಾ.ಜಿ.ಎಸ್. ಶಿವರುದ್ರಪ್ಪ ಮತ್ತು ಡಾ.ಯು.ಆರ್. ಅನಂತಮೂರ್ತಿಯವರ ಪುಣ್ಯಸ್ಥಳ ಗೌರವ ಕ್ರಿಯಾ ಸಮಿತಿ ರಚಿಸಿಕೊಂಡಿದ್ದು, ವಡ್ಡಗೆರೆ ನಾಗರಾಜಯ್ಯ, ಪುಸ್ತಕಮನೆ ಹರಿಹರಪ್ರಿಯ, ಯೋಗೇಶ್ ಮಾಸ್ಟರ್, ಮಲ್ಲಿಕಾರ್ಜುನಸ್ವಾಮಿ ಮಹಾಮನೆ, ಕೆ. ಷರೀಫಾ, ಕೆ.ಎನ್. ಯೋಗೇಶ್, ಕೆ.ಎಚ್. ಕುಮಾರ್ ಸೇರಿದಂತೆ ಹಲವರು ನಾಮಫಲಕ ಮತ್ತು ಭಾವಚಿತ್ರ ಅಳವಡಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಅಲ್ಲಿಯೇ ಕವಿಗೋಷ್ಠಿ ನಡೆಸಿದರು.