ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಎನ್.ನಂದಿನಿ, ‘ನಗರೀಕರಣ, ಜನಸಂಖ್ಯೆ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕೆರೆಗಳು ನಶಿಸಿಹೋಗುತ್ತಿವೆ. ಸಿಂಗನಾಯಕನಹಳ್ಳಿ ಕೆರೆಯು 400 ಎಕರೆ ಕೃಷಿ ಭೂಮಿಯಿಂದ ಆವೃತ್ತವಾಗಿದೆ. ಮಳೆ ನೀರು ಇದಕ್ಕೆ ಆಧಾರ. ಕೆಲ ಷರತ್ತುಗಳ ಮೇಲೆ ಕೆರೆಯನ್ನು ಪುನಶ್ಚೇತನಗೊಳಿಸಬೇಕು.ಕೆರೆಯ ನಡುವೆ ದ್ವೀಪ ನಿರ್ಮಿಸಿ ಆ ಮೂಲಕ ಜೀವ ಸಂಕುಲದ ಉಳಿವಿಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.