ಬೆಂಗಳೂರು: ‘ಜನರ ಉತ್ತಮ ಆರೋಗ್ಯಕ್ಕಾಗಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ವ್ಯವಸ್ಥೆಗಳನ್ನು ನಿರ್ಮಿಸಲು ಸರ್ಕಾರ ಒತ್ತು ನೀಡಿದೆ’ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಯಶವಂತಪುರದ ಕಮಲಾ ನೆಹರು ಬಡಾವಣೆ ತ್ರಿವೇಣಿ ರಸ್ತೆ 6ನೇ ಕ್ರಾಸ್ನಲ್ಲಿ ಸ್ಥಾಪಿಸಿರುವ ‘ನಮ್ಮ ಕ್ಲಿನಿಕ್’ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಮಲ್ಲೇಶ್ವರ ಕ್ಷೇತ್ರದ ಏಳು ವಾರ್ಡ್ ಗಳಲ್ಲೂ ತಲಾ ಒಂದು ‘ನಮ್ಮ ಕ್ಲಿನಿಕ್’ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಈ 14 ಕೇಂದ್ರಗಳ ಪೈಕಿ 13 ಕೇಂದ್ರ ಗಳನ್ನು ಸರ್ಕಾರಕ್ಕೆ ಸೇರಿದ ಕಟ್ಟಡಗಳಲ್ಲಿಯೇ ಸ್ಥಾಪಿಸಲಾಗಿದೆ’ ಎಂದು ತಿಳಿಸಿದರು.
ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೊದಲು 350 ಬೆಡ್ ಇತ್ತು. ಈಗ ಅದನ್ನು 650 ಬೆಡ್ಗಳಿಗೆ ಹೆಚ್ಚಿಸಲಾಗಿದೆ. ಟ್ರಾಮಾ ಸೆಂಟರ್ ಕೂಡ ಇದೆ ಎಂದರು.