‘ಕೆ.ಆರ್.ಪುರದಿಂದ –ವಿಮಾನ ನಿಲ್ದಾಣ (2ಬಿ) ಮಾರ್ಗದಲ್ಲಿ ಬೆಟ್ಟಹಲಸೂರು ನಿಲ್ದಾಣ ನಿರ್ಮಾಣಕ್ಕಾಗಿ ಹೆಚ್ಚುವರಿ ಜಾಗ ಬೇಕಾಗಿತ್ತು. ಇದಕ್ಕಾಗಿ 9,424 ಚ.ಮೀ. ನಷ್ಟು ಭೂಮಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದು ಪೂರ್ಣವಾದರೆ, ಈ ಮಾರ್ಗದಲ್ಲಿನ ಭೂಸ್ವಾಧೀನ ಕಾರ್ಯ ಮುಕ್ತಾಯವಾಗುತ್ತದೆ’ ಎಂದು ಬಿಎಂಆರ್ಸಿಎಲ್ನ ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕ ಚೆನ್ನಪ್ಪಗೌಡರ್ ‘ಪ್ರಜಾವಾಣಿ’ಗೆ ತಿಳಿಸಿದರು.