ಬೆಂಗಳೂರು: ನಮ್ಮ ಮೆಟ್ರೊದ ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು 3 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ, ಜ.26ರಿಂದ 28ರವರೆಗೆ ಮೆಟ್ರೊ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಿದೆ.