<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿನ ಮಹಾಕವಿ ಕುವೆಂಪು ರಸ್ತೆ ಹಾಗೂ ರಾಜಾಜಿನಗರ ಮೆಟ್ರೊ ನಿಲ್ದಾಣ ನಡುವಿನ ಪಿಲ್ಲರ್ (ಸಂಖ್ಯೆ 221) ಬೇರಿಂಗ್ನಲ್ಲಿ ದೋಷ ಕಾಣಿಸಿಕೊಂಡಿರುವುದರಿಂದ ಭಾನುವಾರ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.</p>.<p>ಅಂದು ಬೆಳಿಗ್ಗೆ 7ರಿಂದ 9ರವರೆಗೆ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ನಿಲ್ದಾಣದಿಂದ ನಾಗಸಂದ್ರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನಂತರ ಎಂದಿನಂತೆ ಕಾರ್ಯಾಚರಣೆ ನಡೆಯಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಹೇಳಿದೆ.</p>.<p>ಬೈಯ್ಯಪ್ಪನಹಳ್ಳಿ-ಮೈಸೂರು ರಸ್ತೆಯ ನೇರಳೆ ಮಾರ್ಗ ಹಳೆಯದಾಗಿರುವುದರಿಂದ ಆಗಾಗ್ಗೆ ಬೇರಿಂಗ್ ಬದಲಾವಣೆ ಮಾಡುವುದು ಅನಿವಾರ್ಯ ಎನ್ನಬಹುದು. ಆದರೆ, ಇತ್ತೀಚೆಗೆ ಕಾರ್ಯಾಚರಿಸುತ್ತಿರುವ ಹಸಿರು ಮಾರ್ಗದಲ್ಲಿ ಇದೇ ಮೊದಲ ಬಾರಿಗೆ ಬೇರಿಂಗ್ ಬದಲಾಯಿಸಲಾಗುತ್ತಿದೆ.</p>.<p>‘ಹಸಿರು ಮಾರ್ಗ ನಿರ್ಮಾಣವಾಗಿ ಐದು ವರ್ಷಗಳೂ ಆಗಿಲ್ಲ. ಇಷ್ಟು ಬೇಗ ಬೇರಿಂಗ್ ಹಾಳಾಗಿವೆ. ಈ ಹಿಂದೆ ಪಿಲ್ಲರ್ಗಳ ದುರಸ್ತಿಗಾಗಿ ಮಾಡಿದ ವೆಚ್ಚವನ್ನೂ ನಿಗಮವು ಬಹಿರಂಗಗೊಳಿಸಿಲ್ಲ. ಈ ಕುರಿತು ಸೂಕ್ತ ತನಿಖೆ ನಡೆಯಬೇಕು’ ಎಂದು ಬಿಎಂಆರ್ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ದ ಹಸಿರು ಮಾರ್ಗದಲ್ಲಿನ ಮಹಾಕವಿ ಕುವೆಂಪು ರಸ್ತೆ ಹಾಗೂ ರಾಜಾಜಿನಗರ ಮೆಟ್ರೊ ನಿಲ್ದಾಣ ನಡುವಿನ ಪಿಲ್ಲರ್ (ಸಂಖ್ಯೆ 221) ಬೇರಿಂಗ್ನಲ್ಲಿ ದೋಷ ಕಾಣಿಸಿಕೊಂಡಿರುವುದರಿಂದ ಭಾನುವಾರ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.</p>.<p>ಅಂದು ಬೆಳಿಗ್ಗೆ 7ರಿಂದ 9ರವರೆಗೆ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ನಿಲ್ದಾಣದಿಂದ ನಾಗಸಂದ್ರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನಂತರ ಎಂದಿನಂತೆ ಕಾರ್ಯಾಚರಣೆ ನಡೆಯಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಹೇಳಿದೆ.</p>.<p>ಬೈಯ್ಯಪ್ಪನಹಳ್ಳಿ-ಮೈಸೂರು ರಸ್ತೆಯ ನೇರಳೆ ಮಾರ್ಗ ಹಳೆಯದಾಗಿರುವುದರಿಂದ ಆಗಾಗ್ಗೆ ಬೇರಿಂಗ್ ಬದಲಾವಣೆ ಮಾಡುವುದು ಅನಿವಾರ್ಯ ಎನ್ನಬಹುದು. ಆದರೆ, ಇತ್ತೀಚೆಗೆ ಕಾರ್ಯಾಚರಿಸುತ್ತಿರುವ ಹಸಿರು ಮಾರ್ಗದಲ್ಲಿ ಇದೇ ಮೊದಲ ಬಾರಿಗೆ ಬೇರಿಂಗ್ ಬದಲಾಯಿಸಲಾಗುತ್ತಿದೆ.</p>.<p>‘ಹಸಿರು ಮಾರ್ಗ ನಿರ್ಮಾಣವಾಗಿ ಐದು ವರ್ಷಗಳೂ ಆಗಿಲ್ಲ. ಇಷ್ಟು ಬೇಗ ಬೇರಿಂಗ್ ಹಾಳಾಗಿವೆ. ಈ ಹಿಂದೆ ಪಿಲ್ಲರ್ಗಳ ದುರಸ್ತಿಗಾಗಿ ಮಾಡಿದ ವೆಚ್ಚವನ್ನೂ ನಿಗಮವು ಬಹಿರಂಗಗೊಳಿಸಿಲ್ಲ. ಈ ಕುರಿತು ಸೂಕ್ತ ತನಿಖೆ ನಡೆಯಬೇಕು’ ಎಂದು ಬಿಎಂಆರ್ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>