<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ಕಂಟೋನ್ಮೆಂಟ್ ನಿಲ್ದಾಣದಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯುವ ಕಾಮಗಾರಿ ನಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ ಇಲ್ಲಿನ ಕಟ್ಟಡಗಳು ಕಂಪಿಸಿವೆ.</p>.<p>ಶಿವಾಜಿ ನಗರ ಪೊಲೀಸ್ ಠಾಣೆಯಿಂದ ಸುಮಾರು 20 ಅಡಿ ದೂರದಲ್ಲಿರುವ ಬಹುಅಂತಸ್ತಿನ ಕಟ್ಟಡವೊಂದರ ಅಡಿಪಾಯದ ಬಳಿಯ ಸ್ವಲ್ಪ ಭಾಗ ಕುಸಿದಿದೆ. ಯಾವುದೇ ಅವಘಡ ಸಂಭವಿಸಿರದಿದ್ದರೂ ಸ್ಥಳೀಯರು ಆತಂಕಗೊಂಡಿದ್ದಾರೆ.</p>.<p>‘ಮದೀನಾ ನಗರದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಸುರಂಗ ಕೊರೆಯಲಾಗುತ್ತಿದೆ. ಕೇವಲ 1 ಕಿ.ಮೀ. ಅಂತರದಲ್ಲಿ ಇದು ಮೂರನೇ ಬಾರಿ ಈ ರೀತಿ ಕಟ್ಟಡಗಳು ಅಲುಗಾಡುವ ಸಂದರ್ಭ ನೋಡುತ್ತಿದ್ದೇವೆ. ಆತಂಕವಾಗುತ್ತಿದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದರು.</p>.<p>ಮಧ್ಯಾಹ್ನ ಒಂದು ಗಂಟೆಯ ಹೊತ್ತಿಗೆ ಕಟ್ಟಡದ ಅಡಿಪಾಯದ ಬದಿಯ ಭಾಗ ಕುಸಿದಿದೆ. ಈ ಕಟ್ಟಡದಲ್ಲಿ ವಾಸವಿದ್ದವರು ನಿಗಮದ ಸೂಚನೆ ಮೇರೆಗೆ ನಾಲ್ಕು ದಿನಗಳ ಹಿಂದೆಯೇ ಮನೆ ಖಾಲಿ ಮಾಡಿದ್ದಾರೆ. ಆದರೆ, ಮನೆಯಲ್ಲಿನ ವಸ್ತುಗಳು ಹಾಗೇ ಇದ್ದವು. ಮೆಟ್ರೊ ಕಾರ್ಮಿಕರು ಸಂಜೆ 4ರವರೆಗೂ ವಸ್ತುಗಳನ್ನೆಲ್ಲ ತೆರವುಗೊಳಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು.</p>.<p>‘ಕಟ್ಟಡದ ಕೆಳಗಡೆಯೇ ವಿದ್ಯುತ್ ಕಂಬ ಇದೆ. ಕಟ್ಟಡದ ಸ್ವಲ್ಪ ದೂರದಲ್ಲಿನ ಮನೆಗಳಲ್ಲಿ ಜನ ವಾಸಿಸುತ್ತಿದ್ದಾರೆ. ಎರಡು–ಮೂರು ದಿನಗಳಲ್ಲಿ ರಂಜಾನ್ ಕೂಡ ಇದೆ. ಹೆಚ್ಚು ಜನ ಶಿವಾಜಿ ನಗರದಲ್ಲಿ ಓಡಾಡುತ್ತಾರೆ. ಈ ವೇಳೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಬಿಎಂಆರ್ಸಿಎಲ್ ತೆಗೆದುಕೊಳ್ಳಬೇಕು’ ಎಂದು ಸ್ಥಳೀಯ ನಿವಾಸಿ, ಹಿರಿಯ ನಾಗರಿಕ ಮಹಮ್ಮದ್ ಸಿದ್ದಿಕಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಿವಾಜಿನಗರ ನಗರದ ಅತಿ ಹಳೆಯ ಪ್ರದೇಶ. ಹಳೆಯ ಕಟ್ಟಡಗಳು ಇಲ್ಲಿವೆ. ಅಲ್ಲದೆ, ಭೂಮಿಯ ತೀರಾ ಮೇಲ್ಮಟ್ಟದಲ್ಲಿ ನೀರು ಮತ್ತು ದೊಡ್ಡ ಬಂಡೆಗಳು ಇವೆ. ಅದರ ಮೇಲೆ ಈ ಪ್ರದೇಶ ನಿರ್ಮಾಣವಾಗಿದೆ. ಸುರಂಗ ಕೊರೆಯುವಾಗ ಎಷ್ಟು ಜಾಗ್ರತೆ ವಹಿಸಿದರೂ ಕಡಿಮೆಯೇ’ ಎಂದು ಅವರು ಹೇಳಿದರು.</p>.<p>‘ಹಗಲು ಮತ್ತು ರಾತ್ರಿಯ ವೇಳೆ ಕಾರ್ಮಿಕರು ಮಾತ್ರ ಕೆಲಸ ಮಾಡುತ್ತಿರುತ್ತಾರೆ. ನಿಗಮದ ಅಧಿಕಾರಿಯೊಬ್ಬರು ಸ್ಥಳದಲ್ಲಿರಬೇಕು. ಮೇಲ್ವಿಚಾರಕರೊಬ್ಬರನ್ನು ನೇಮಕ ಮಾಡುವ ಅಗತ್ಯವಿದೆ’ ಎಂದು ಅವರು ಸಲಹೆ ನೀಡಿದರು.</p>.<p>‘ಮೊದಲನೇ ಹಂತದ ಅನುಭವದ ಆಧಾರದ ಮೇಲೆ ಈ ಬಾರಿ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಕಾಮಗಾರಿ ವೇಳೆ ಯಾವ ಕಟ್ಟಡಗಳಿಗೆ ಹಾನಿ ಆಗಬಹುದು ಎಂಬ ಸಮೀಕ್ಷೆ ನಡೆಸಿ, ಆ ಕಟ್ಟಡಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ’ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಟ್ಟಡದವರು ವಸ್ತುಗಳನ್ನು ತೆರವುಗೊಳಿಸದಿದ್ದ ಕಾರಣ, ನಮ್ಮ ಕಾರ್ಮಿಕರೇ ಅವುಗಳನ್ನು ತೆರವುಗೊಳಿಸಿದ್ದಾರೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಯಾವಾಗಲೂ ಮೇಲ್ವಿಚಾರಕರೊಬ್ಬರು ಇರುತ್ತಾರೆ’ ಎಂದೂ ಹೇಳಿದರು.</p>.<p><strong>ರಾಕೇಶ್ ಸಿಂಗ್ಗೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹೊಣೆ<br />ಬೆಂಗಳೂರು: </strong>ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಹಿರಿಯ ಐಎಎಸ್ ಅಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನೂ ನಿಭಾಯಿಸುತ್ತಿದ್ದಾರೆ.</p>.<p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜಯ್ ಸೇಠ್ ಅವರು ಕೇಂದ್ರ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ಕಂಟೋನ್ಮೆಂಟ್ ನಿಲ್ದಾಣದಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯುವ ಕಾಮಗಾರಿ ನಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ ಇಲ್ಲಿನ ಕಟ್ಟಡಗಳು ಕಂಪಿಸಿವೆ.</p>.<p>ಶಿವಾಜಿ ನಗರ ಪೊಲೀಸ್ ಠಾಣೆಯಿಂದ ಸುಮಾರು 20 ಅಡಿ ದೂರದಲ್ಲಿರುವ ಬಹುಅಂತಸ್ತಿನ ಕಟ್ಟಡವೊಂದರ ಅಡಿಪಾಯದ ಬಳಿಯ ಸ್ವಲ್ಪ ಭಾಗ ಕುಸಿದಿದೆ. ಯಾವುದೇ ಅವಘಡ ಸಂಭವಿಸಿರದಿದ್ದರೂ ಸ್ಥಳೀಯರು ಆತಂಕಗೊಂಡಿದ್ದಾರೆ.</p>.<p>‘ಮದೀನಾ ನಗರದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಸುರಂಗ ಕೊರೆಯಲಾಗುತ್ತಿದೆ. ಕೇವಲ 1 ಕಿ.ಮೀ. ಅಂತರದಲ್ಲಿ ಇದು ಮೂರನೇ ಬಾರಿ ಈ ರೀತಿ ಕಟ್ಟಡಗಳು ಅಲುಗಾಡುವ ಸಂದರ್ಭ ನೋಡುತ್ತಿದ್ದೇವೆ. ಆತಂಕವಾಗುತ್ತಿದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದರು.</p>.<p>ಮಧ್ಯಾಹ್ನ ಒಂದು ಗಂಟೆಯ ಹೊತ್ತಿಗೆ ಕಟ್ಟಡದ ಅಡಿಪಾಯದ ಬದಿಯ ಭಾಗ ಕುಸಿದಿದೆ. ಈ ಕಟ್ಟಡದಲ್ಲಿ ವಾಸವಿದ್ದವರು ನಿಗಮದ ಸೂಚನೆ ಮೇರೆಗೆ ನಾಲ್ಕು ದಿನಗಳ ಹಿಂದೆಯೇ ಮನೆ ಖಾಲಿ ಮಾಡಿದ್ದಾರೆ. ಆದರೆ, ಮನೆಯಲ್ಲಿನ ವಸ್ತುಗಳು ಹಾಗೇ ಇದ್ದವು. ಮೆಟ್ರೊ ಕಾರ್ಮಿಕರು ಸಂಜೆ 4ರವರೆಗೂ ವಸ್ತುಗಳನ್ನೆಲ್ಲ ತೆರವುಗೊಳಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು.</p>.<p>‘ಕಟ್ಟಡದ ಕೆಳಗಡೆಯೇ ವಿದ್ಯುತ್ ಕಂಬ ಇದೆ. ಕಟ್ಟಡದ ಸ್ವಲ್ಪ ದೂರದಲ್ಲಿನ ಮನೆಗಳಲ್ಲಿ ಜನ ವಾಸಿಸುತ್ತಿದ್ದಾರೆ. ಎರಡು–ಮೂರು ದಿನಗಳಲ್ಲಿ ರಂಜಾನ್ ಕೂಡ ಇದೆ. ಹೆಚ್ಚು ಜನ ಶಿವಾಜಿ ನಗರದಲ್ಲಿ ಓಡಾಡುತ್ತಾರೆ. ಈ ವೇಳೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಬಿಎಂಆರ್ಸಿಎಲ್ ತೆಗೆದುಕೊಳ್ಳಬೇಕು’ ಎಂದು ಸ್ಥಳೀಯ ನಿವಾಸಿ, ಹಿರಿಯ ನಾಗರಿಕ ಮಹಮ್ಮದ್ ಸಿದ್ದಿಕಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಿವಾಜಿನಗರ ನಗರದ ಅತಿ ಹಳೆಯ ಪ್ರದೇಶ. ಹಳೆಯ ಕಟ್ಟಡಗಳು ಇಲ್ಲಿವೆ. ಅಲ್ಲದೆ, ಭೂಮಿಯ ತೀರಾ ಮೇಲ್ಮಟ್ಟದಲ್ಲಿ ನೀರು ಮತ್ತು ದೊಡ್ಡ ಬಂಡೆಗಳು ಇವೆ. ಅದರ ಮೇಲೆ ಈ ಪ್ರದೇಶ ನಿರ್ಮಾಣವಾಗಿದೆ. ಸುರಂಗ ಕೊರೆಯುವಾಗ ಎಷ್ಟು ಜಾಗ್ರತೆ ವಹಿಸಿದರೂ ಕಡಿಮೆಯೇ’ ಎಂದು ಅವರು ಹೇಳಿದರು.</p>.<p>‘ಹಗಲು ಮತ್ತು ರಾತ್ರಿಯ ವೇಳೆ ಕಾರ್ಮಿಕರು ಮಾತ್ರ ಕೆಲಸ ಮಾಡುತ್ತಿರುತ್ತಾರೆ. ನಿಗಮದ ಅಧಿಕಾರಿಯೊಬ್ಬರು ಸ್ಥಳದಲ್ಲಿರಬೇಕು. ಮೇಲ್ವಿಚಾರಕರೊಬ್ಬರನ್ನು ನೇಮಕ ಮಾಡುವ ಅಗತ್ಯವಿದೆ’ ಎಂದು ಅವರು ಸಲಹೆ ನೀಡಿದರು.</p>.<p>‘ಮೊದಲನೇ ಹಂತದ ಅನುಭವದ ಆಧಾರದ ಮೇಲೆ ಈ ಬಾರಿ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಕಾಮಗಾರಿ ವೇಳೆ ಯಾವ ಕಟ್ಟಡಗಳಿಗೆ ಹಾನಿ ಆಗಬಹುದು ಎಂಬ ಸಮೀಕ್ಷೆ ನಡೆಸಿ, ಆ ಕಟ್ಟಡಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ’ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಟ್ಟಡದವರು ವಸ್ತುಗಳನ್ನು ತೆರವುಗೊಳಿಸದಿದ್ದ ಕಾರಣ, ನಮ್ಮ ಕಾರ್ಮಿಕರೇ ಅವುಗಳನ್ನು ತೆರವುಗೊಳಿಸಿದ್ದಾರೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಯಾವಾಗಲೂ ಮೇಲ್ವಿಚಾರಕರೊಬ್ಬರು ಇರುತ್ತಾರೆ’ ಎಂದೂ ಹೇಳಿದರು.</p>.<p><strong>ರಾಕೇಶ್ ಸಿಂಗ್ಗೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹೊಣೆ<br />ಬೆಂಗಳೂರು: </strong>ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಹಿರಿಯ ಐಎಎಸ್ ಅಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನೂ ನಿಭಾಯಿಸುತ್ತಿದ್ದಾರೆ.</p>.<p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜಯ್ ಸೇಠ್ ಅವರು ಕೇಂದ್ರ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>