<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿನ ನಾಗವಾರ- ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ಸಿಎಲ್) ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ಅನುಮತಿ ನೀಡಿತು. ತೆರವುಗೊಳಿಸುವ ಮರಗಳಿಗೆ ಪರ್ಯಾಯವಾಗಿ ನೆಡಲಾಗುವ ಸಸಿಗಳ (ಅರಣ್ಯೀಕರಣ) ವಿವರ ಒಳಗೊಂಡ ವರದಿ ನೀಡುವಂತೆಯೂ ಸೂಚಿಸಿತು.</p>.<p>ತಜ್ಞರ ಸಮಿತಿ ಸಲಹೆಯಂತೆ ನಿಗಮವು ಮೆಟ್ರೊ ನಿರ್ಮಾಣಕ್ಕಾಗಿ ಈ ಮಾರ್ಗದಲ್ಲಿ ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಅಲ್ಲದೆ, 2021ರ ಮಾರ್ಚ್ನಿಂದ ಮೇ ತಿಂಗಳ ಅವಧಿಯಲ್ಲಿ ಈ ಕುರಿತು ಹಲವು ಅಧಿಸೂಚನೆಗಳನ್ನೂ ಹೊರಡಿಸಿತ್ತು.</p>.<p>‘ಮರಗಳನ್ನು ಸ್ಥಳಾಂತರಿಸುವ ವೇಳೆ ತಾನು ನೇಮಿಸಿದ ಅಧಿಕಾರಿ ಅಥವಾ ವೃಕ್ಷ ಅಧಿಕಾರಿಯು ಹಾಜರಿರಬೇಕು. ಮರಗಳ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಿಎಂಆರ್ಸಿಎಲ್ನಿಂದ ಮಾಹಿತಿ ಪಡೆದು, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದೂ ಪೀಠವು ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿನ ನಾಗವಾರ- ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ಸಿಎಲ್) ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.</p>.<p>ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ಅನುಮತಿ ನೀಡಿತು. ತೆರವುಗೊಳಿಸುವ ಮರಗಳಿಗೆ ಪರ್ಯಾಯವಾಗಿ ನೆಡಲಾಗುವ ಸಸಿಗಳ (ಅರಣ್ಯೀಕರಣ) ವಿವರ ಒಳಗೊಂಡ ವರದಿ ನೀಡುವಂತೆಯೂ ಸೂಚಿಸಿತು.</p>.<p>ತಜ್ಞರ ಸಮಿತಿ ಸಲಹೆಯಂತೆ ನಿಗಮವು ಮೆಟ್ರೊ ನಿರ್ಮಾಣಕ್ಕಾಗಿ ಈ ಮಾರ್ಗದಲ್ಲಿ ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಅಲ್ಲದೆ, 2021ರ ಮಾರ್ಚ್ನಿಂದ ಮೇ ತಿಂಗಳ ಅವಧಿಯಲ್ಲಿ ಈ ಕುರಿತು ಹಲವು ಅಧಿಸೂಚನೆಗಳನ್ನೂ ಹೊರಡಿಸಿತ್ತು.</p>.<p>‘ಮರಗಳನ್ನು ಸ್ಥಳಾಂತರಿಸುವ ವೇಳೆ ತಾನು ನೇಮಿಸಿದ ಅಧಿಕಾರಿ ಅಥವಾ ವೃಕ್ಷ ಅಧಿಕಾರಿಯು ಹಾಜರಿರಬೇಕು. ಮರಗಳ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಿಎಂಆರ್ಸಿಎಲ್ನಿಂದ ಮಾಹಿತಿ ಪಡೆದು, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದೂ ಪೀಠವು ನಿರ್ದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>