<p><strong>ಬೆಂಗಳೂರು</strong>: ಬೆಂಗಳೂರು ಮೆಟ್ರೊ ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ.</p><p>ದರ ನಿರ್ಧಾರದಲ್ಲಿ ಕೇಂದ್ರ ಸರ್ಕಾರ ನೇಮಿಸುವ ಸಮಿತಿಯದ್ದೇ ನಿಜವಾದ ಪಾತ್ರ ಎಂದು ಅವರು ದಾಖಲೆಯೊಂದನ್ನು ಹಂಚಿಕೊಂಡು ಎಕ್ಸ್ ಪೋಸ್ಟ್ ಮಾಡಿದ್ದಾರೆ.</p><p>ಮೆಟ್ರೊ ಪ್ರಯಾಣ ದರ ಏರಿಕೆಯನ್ನು ಪುನರ್ ಪರಿಶೀಲಿಸುವಂತೆ ನಾನು ಔಪಚಾರಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ಕಡಿಮೆ ಆದಾಯ ಹೊಂದಿದವರಿಗೆ ಹೆಚ್ಚಿನ ಪ್ರಯಾಣ ದರ ಪಾವತಿಸುವುದು ಕಷ್ಟ. ಹೀಗಾಗಿ ಇವರಿಗಾದರೂ ದರ ಕಡಿಮೆ ಆಗಬೇಕೆಂಬುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.</p><p>ದುರಾದೃಷ್ಟವಶಾತ್, ರಾಜ್ಯದ ಬಿಜೆಪಿ ಸಂಸದರು, ಅದರ ನಾಯಕರು ದೆಹಲಿಯಲ್ಲಿ ಕರ್ನಾಟಕದ ಹಿತಾಸಕ್ತಿ ರಕ್ಷಿಸುವಲ್ಲಿ ವಿಫಲವಾಗಿದ್ದಾರೆ. ಇದರ ಪರಿಣಾಮ ಜನ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಆದರೆ, ನಾವು ಯಾವಾಗಲೂ ಕನ್ನಡಿಗರೊಂದಿಗೆ ಬೆಂಗಳೂರು ಜನರೊಂದಿಗೆ ನಿಂತುಕೊಳ್ಳಲು ಬಯಸುತ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.</p>.ಮೆಟ್ರೊ ಪ್ರಯಾಣ ದರ ಪರಿಷ್ಕರಣೆ ಪಟ್ಟಿ ಪ್ರಕಟ: ಸೋಮವಾರದಿಂದ ಜಾರಿ.ಇದು ಸಾರ್ವಜನಿಕ ಸೇವೆಯೋ, ಲೂಟಿಯೋ: ಮೆಟ್ರೊ ಪ್ರಯಾಣ ದರ ಏರಿಕೆಗೆ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಮೆಟ್ರೊ ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ.</p><p>ದರ ನಿರ್ಧಾರದಲ್ಲಿ ಕೇಂದ್ರ ಸರ್ಕಾರ ನೇಮಿಸುವ ಸಮಿತಿಯದ್ದೇ ನಿಜವಾದ ಪಾತ್ರ ಎಂದು ಅವರು ದಾಖಲೆಯೊಂದನ್ನು ಹಂಚಿಕೊಂಡು ಎಕ್ಸ್ ಪೋಸ್ಟ್ ಮಾಡಿದ್ದಾರೆ.</p><p>ಮೆಟ್ರೊ ಪ್ರಯಾಣ ದರ ಏರಿಕೆಯನ್ನು ಪುನರ್ ಪರಿಶೀಲಿಸುವಂತೆ ನಾನು ಔಪಚಾರಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ, ಕಡಿಮೆ ಆದಾಯ ಹೊಂದಿದವರಿಗೆ ಹೆಚ್ಚಿನ ಪ್ರಯಾಣ ದರ ಪಾವತಿಸುವುದು ಕಷ್ಟ. ಹೀಗಾಗಿ ಇವರಿಗಾದರೂ ದರ ಕಡಿಮೆ ಆಗಬೇಕೆಂಬುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.</p><p>ದುರಾದೃಷ್ಟವಶಾತ್, ರಾಜ್ಯದ ಬಿಜೆಪಿ ಸಂಸದರು, ಅದರ ನಾಯಕರು ದೆಹಲಿಯಲ್ಲಿ ಕರ್ನಾಟಕದ ಹಿತಾಸಕ್ತಿ ರಕ್ಷಿಸುವಲ್ಲಿ ವಿಫಲವಾಗಿದ್ದಾರೆ. ಇದರ ಪರಿಣಾಮ ಜನ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಆದರೆ, ನಾವು ಯಾವಾಗಲೂ ಕನ್ನಡಿಗರೊಂದಿಗೆ ಬೆಂಗಳೂರು ಜನರೊಂದಿಗೆ ನಿಂತುಕೊಳ್ಳಲು ಬಯಸುತ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.</p>.ಮೆಟ್ರೊ ಪ್ರಯಾಣ ದರ ಪರಿಷ್ಕರಣೆ ಪಟ್ಟಿ ಪ್ರಕಟ: ಸೋಮವಾರದಿಂದ ಜಾರಿ.ಇದು ಸಾರ್ವಜನಿಕ ಸೇವೆಯೋ, ಲೂಟಿಯೋ: ಮೆಟ್ರೊ ಪ್ರಯಾಣ ದರ ಏರಿಕೆಗೆ ಆಕ್ರೋಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>