<p>ಬೆಂಗಳೂರು: ಮೆಟ್ರೊ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಳಿಗಾಗಿ ಆ.10, 11 ಮತ್ತು 14ರಂದು ಬೆಳಿಗ್ಗೆ ಕೆಲವು ನಿಲ್ದಾಣಗಳಲ್ಲಿ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.</p>.<p>ಬೈಯಪ್ಪನಹಳ್ಳಿ ಟರ್ಮಿನಲ್ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೊ ನಿಲ್ದಾಣ, ಕೃಷ್ಣರಾಜಪುರ, ವೈಟ್ಫೀಲ್ಡ್ವರೆಗೆ ಮೆಟ್ರೊ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್ ಮತ್ತು ಇತರ ಕಾಮಗಾರಿಗಳು ನಡೆಯಲಿವೆ. ಬೈಯಪ್ಪನಹಳ್ಳಿವರೆಗೆ ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿದ್ದು, ಅಲ್ಲಿಂದ ಮುಂದಕ್ಕೆ ವೈಟ್ಫೀಲ್ಡ್ವರೆಗೆ ಬೆಳಿಗ್ಗೆ 7 ಗಂಟೆಯವರೆಗೆ ಸಂಚಾರ ಇರುವುದಿಲ್ಲ. </p>.<p>ಕೆಂಗೇರಿ ನಿಲ್ದಾಣದಿಂದ ಚಲ್ಲಘಟ್ಟವರೆಗೆ ಸಿಗ್ನಲಿಂಗ್ ಮತ್ತು ಇತರ ಕಾಮಗಾರಿಗಳನ್ನು ಆ.14ರಂದು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 5ರಿಂದ 7ರವರೆಗೆ ಕೆಂಗೇರಿ–ವಿಜಯನಗರ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. </p>.<p>ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮೆಟ್ರೊ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಳಿಗಾಗಿ ಆ.10, 11 ಮತ್ತು 14ರಂದು ಬೆಳಿಗ್ಗೆ ಕೆಲವು ನಿಲ್ದಾಣಗಳಲ್ಲಿ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.</p>.<p>ಬೈಯಪ್ಪನಹಳ್ಳಿ ಟರ್ಮಿನಲ್ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೊ ನಿಲ್ದಾಣ, ಕೃಷ್ಣರಾಜಪುರ, ವೈಟ್ಫೀಲ್ಡ್ವರೆಗೆ ಮೆಟ್ರೊ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್ ಮತ್ತು ಇತರ ಕಾಮಗಾರಿಗಳು ನಡೆಯಲಿವೆ. ಬೈಯಪ್ಪನಹಳ್ಳಿವರೆಗೆ ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿದ್ದು, ಅಲ್ಲಿಂದ ಮುಂದಕ್ಕೆ ವೈಟ್ಫೀಲ್ಡ್ವರೆಗೆ ಬೆಳಿಗ್ಗೆ 7 ಗಂಟೆಯವರೆಗೆ ಸಂಚಾರ ಇರುವುದಿಲ್ಲ. </p>.<p>ಕೆಂಗೇರಿ ನಿಲ್ದಾಣದಿಂದ ಚಲ್ಲಘಟ್ಟವರೆಗೆ ಸಿಗ್ನಲಿಂಗ್ ಮತ್ತು ಇತರ ಕಾಮಗಾರಿಗಳನ್ನು ಆ.14ರಂದು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 5ರಿಂದ 7ರವರೆಗೆ ಕೆಂಗೇರಿ–ವಿಜಯನಗರ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. </p>.<p>ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>