‘ಬೊಮ್ಮಸಂದ್ರದಿಂದ ಹೊಸೂರು ನಡುವಿನ ಮೆಟ್ರೊ ರೈಲು ಮಾರ್ಗ ವಿಸ್ತರಿಸುವ ಸಂಬಂಧ ತಮಿಳುನಾಡು ಸರ್ಕಾರ ಅಧ್ಯಯನ ನಡೆಸಬಹುದು’ ಎಂದು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ. ಕರ್ನಾಟಕ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವ ವಿಷಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ(ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗೆ ಮೇ 23ರಂದು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.