ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಯಲಚೇನಹಳ್ಳಿ–ಅಂಜನಾಪುರ ವಿಸ್ತರಿತ ಮಾರ್ಗದಲ್ಲಿ ಇದೇ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ಮೆಟ್ರೊ ರೈಲಿನ ಸಾರ್ವಜನಿಕ ಸೇವೆ ಆರಂಭವಾಗಲಿದೆ. ಆದರೆ, ಈ ಮಾರ್ಗದ ನಿರ್ಮಾಣದ ವೇಳೆ ಕನಕಪುರ ರಸ್ತೆ ಹಾಳಾಗಿದ್ದು, ರೈಲು ಸಂಚಾರ ಆರಂಭಕ್ಕೂ ಮುನ್ನವೇ ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಬಿಎಂಆರ್ಸಿಎಲ್ಗೆ ಸ್ಥಳೀಯರು ಒತ್ತಾಯಿಸಿದ್ದಾರೆ.