ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಟ್ರ್ಯಾಕ್ ನಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.
ರೀ ರೈಲ್ ಅನ್ನು ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಇದೇ ಸ್ಥಿತಿ ಇರಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.
ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ತನಕ ಮಾತ್ರ ಮೆಟ್ರೊ ಸಂಚರಿಸುತ್ತಿವೆ. ಅಲ್ಲೂ ನಿಗದಿತ ಸಮಯಕ್ಕೆ ಮೆಟ್ರೊ ಸಂಚಾರ ನಡೆಸುತ್ತಿಲ್ಲ.
ಇನ್ನು ಮಂತ್ರಿ ಸ್ಕ್ವೇರ್ನಿಂದ ಯಶವಂತಪುರ ತನಕ ಒಂದು ಮಾರ್ಗದಲ್ಲಿ ಅರ್ಧ ತಾಸಿಗೆ ಒಂದು ಮೆಟ್ರೊ ಸಂಚರಿಸುತ್ತಿದ್ದು ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದೆ.