‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಟೀಷರ ವಿರುದ್ಧ ಸೆಣಸಿದ ಕನ್ನಡ ಕಲಿ. ಕಿತ್ತೂರು ಚೆನ್ನಮ್ಮನ ಬಲಗೈ ಬಂಟನಾಗಿ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಕೊನೆ ಉಸಿರು ಇರುವವರೆಗೂ ಹೋರಾಟ ನಡೆಸಿದ ವ್ಯಕ್ತಿ. ಅವರು ಯುವಜನತೆಗೆ ಸ್ಫೂರ್ತಿ. ಅಂತಹ ಮಹಾನ್ ವ್ಯಕ್ತಿಯ ಹೆಸನ್ನು ಮೇಲ್ಸೇತುವೆಗೆ ಇಟ್ಟಿರುವುದು ಔಚಿತ್ಯಪೂರ್ಣ’ ಎಂದರು.