<p><strong>ಬೆಂಗಳೂರು:</strong> ನಮ್ಮ ಮೆಟ್ರೊವನ್ನು ತುಮಕೂರಿಗೆ ವಿಸ್ತರಿಸುವ ಕುರಿತು ಕಾರ್ಯಸಾಧ್ಯತಾ ವರದಿಯನ್ನು ಸರ್ಕಾರಕ್ಕೆ ಬೆಂಗಳೂರು ಮೆಟ್ರೊ ರೈಲ್ ನಿಗಮ(ಬಿಎಂಆರ್ಸಿಎಲ್) ಸಲ್ಲಿಸಿದೆ.</p>.<p>ಮೆಟ್ರೊ ಹಸಿರು ಮಾರ್ಗವನ್ನು ಮಾದಾವರದಿಂದ ತುಮಕೂರಿಗೆ ವಿಸ್ತರಿಸಲು ಕಾರ್ಯಸಾಧ್ಯತಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರವು ಬಿಎಂಆರ್ಸಿಎಲ್ಗೆ ವರ್ಷದ ಹಿಂದೆ ಸೂಚನೆ ನೀಡಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ ಸಹಿತ ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿಯನ್ನು ತೋರಿಸಿದ್ದರು.</p>.<p>ಇದಕ್ಕಾಗಿ ಬಿಎಂಆರ್ಸಿಎಲ್ ಟೆಂಡರ್ ಕರೆದಿತ್ತು. ಹೈದರಾಬಾದ್ನ ಖಾಸಗಿ ಕಂಪನಿಯು ಸಮೀಕ್ಷೆ ನಡೆಸಿ ಬಿಎಂಆರ್ಸಿಎಲ್ಗೆ ವರದಿ ಒಪ್ಪಿಸಿತ್ತು.</p>.<p>56.6 ಕಿ.ಮೀ. ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡುವ ಈ ಯೋಜನೆ ಇದಾಗಿದ್ದು, ರಾಜ್ಯ ಸರ್ಕಾರದ ಒಪ್ಪಿಗೆ ಸಿಕ್ಕಿದ ಮೇಲೆ ಕೇಂದ್ರ ಸರ್ಕಾರದ ಅನುಮೋದನೆಗೆ ವರದಿ ಸಲ್ಲಿಕೆಯಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಮ್ಮ ಮೆಟ್ರೊವನ್ನು ತುಮಕೂರಿಗೆ ವಿಸ್ತರಿಸುವ ಕುರಿತು ಕಾರ್ಯಸಾಧ್ಯತಾ ವರದಿಯನ್ನು ಸರ್ಕಾರಕ್ಕೆ ಬೆಂಗಳೂರು ಮೆಟ್ರೊ ರೈಲ್ ನಿಗಮ(ಬಿಎಂಆರ್ಸಿಎಲ್) ಸಲ್ಲಿಸಿದೆ.</p>.<p>ಮೆಟ್ರೊ ಹಸಿರು ಮಾರ್ಗವನ್ನು ಮಾದಾವರದಿಂದ ತುಮಕೂರಿಗೆ ವಿಸ್ತರಿಸಲು ಕಾರ್ಯಸಾಧ್ಯತಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರವು ಬಿಎಂಆರ್ಸಿಎಲ್ಗೆ ವರ್ಷದ ಹಿಂದೆ ಸೂಚನೆ ನೀಡಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ ಸಹಿತ ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿಯನ್ನು ತೋರಿಸಿದ್ದರು.</p>.<p>ಇದಕ್ಕಾಗಿ ಬಿಎಂಆರ್ಸಿಎಲ್ ಟೆಂಡರ್ ಕರೆದಿತ್ತು. ಹೈದರಾಬಾದ್ನ ಖಾಸಗಿ ಕಂಪನಿಯು ಸಮೀಕ್ಷೆ ನಡೆಸಿ ಬಿಎಂಆರ್ಸಿಎಲ್ಗೆ ವರದಿ ಒಪ್ಪಿಸಿತ್ತು.</p>.<p>56.6 ಕಿ.ಮೀ. ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡುವ ಈ ಯೋಜನೆ ಇದಾಗಿದ್ದು, ರಾಜ್ಯ ಸರ್ಕಾರದ ಒಪ್ಪಿಗೆ ಸಿಕ್ಕಿದ ಮೇಲೆ ಕೇಂದ್ರ ಸರ್ಕಾರದ ಅನುಮೋದನೆಗೆ ವರದಿ ಸಲ್ಲಿಕೆಯಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>