<p><strong>ಬೆಂಗಳೂರು</strong>: ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯುವಕನೊಬ್ಬ ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದ್ದೆ. ಸಾವಿಗೆ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಿದೆ.</p><p>ಈ ಘಟನೆಯಿಂದ ಮೆಟ್ರೊ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು. ನೇರಳೆ ಮಾರ್ಗದ ರೈಲುಗಳು ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಸಂಚರಿಸಿದ್ದವು.</p><p>ಸದ್ಯ ಮತ್ತೆ ಚಲ್ಲಘಟ್ಟವರೆಗೆ ಮೆಟ್ರೊ ಸಂಚಾರ ಪುನರಾಂಭವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p><p>ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಸೇವೆಗಳು ಇಂದು ಬೆಳಿಗ್ಗೆ 09:40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ತಿಳಿಸಿದೆ.</p>.ಮೆಟ್ರೊ ಗುಲಾಬಿ ಮಾರ್ಗ: ಎಂ.ಜಿ. ರಸ್ತೆಯಲ್ಲಿ ಮೊದಲ ಪಿಎಸ್ಡಿ.ನಮ್ಮ ಮೆಟ್ರೊ ಹಳದಿ ಮಾರ್ಗ: ಪ್ರತಿ ಸೋಮವಾರ ಬೇಗ ಸಂಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯುವಕನೊಬ್ಬ ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದ್ದೆ. ಸಾವಿಗೆ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಿದೆ.</p><p>ಈ ಘಟನೆಯಿಂದ ಮೆಟ್ರೊ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು. ನೇರಳೆ ಮಾರ್ಗದ ರೈಲುಗಳು ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಸಂಚರಿಸಿದ್ದವು.</p><p>ಸದ್ಯ ಮತ್ತೆ ಚಲ್ಲಘಟ್ಟವರೆಗೆ ಮೆಟ್ರೊ ಸಂಚಾರ ಪುನರಾಂಭವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p><p>ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಸೇವೆಗಳು ಇಂದು ಬೆಳಿಗ್ಗೆ 09:40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ತಿಳಿಸಿದೆ.</p>.ಮೆಟ್ರೊ ಗುಲಾಬಿ ಮಾರ್ಗ: ಎಂ.ಜಿ. ರಸ್ತೆಯಲ್ಲಿ ಮೊದಲ ಪಿಎಸ್ಡಿ.ನಮ್ಮ ಮೆಟ್ರೊ ಹಳದಿ ಮಾರ್ಗ: ಪ್ರತಿ ಸೋಮವಾರ ಬೇಗ ಸಂಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>