‘ರಾಜಕುಮಾರ್ ಭಾರತೀಯ ಚಿತ್ರರಂಗದ ಧೀಮಂತ ನಟ. ಕನ್ನಡ ಚಿತ್ರರಂಗಕ್ಕೆ ಜಗತ್ತಿನಾದ್ಯಂತ ಮನ್ನಣೆ ಸಿಗಲು ಅವರೂ ಕಾರಣ. ಕನ್ನಡ ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತೇನೆಂದು ಅವರು ನಿರ್ಧಾರ ಮಾಡದಿದ್ದರೆ, ಇಂದು ಕನ್ನಡ ಚಿತ್ರರಂಗವೆಂಬ ಪ್ರತ್ಯೇಕ ಅಸ್ತಿತ್ವವೇ ಇರುತ್ತಿರಲಿಲ್ಲ’ ಎಂದುಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ನಿರ್ದೇಶಕ ಎಂ. ವೆಂಕಟೇಶ ಶೇಷಾದ್ರಿ ಅಭಿಪ್ರಾಯಪಟ್ಟರು.