<p><span style="text-decoration:underline;"><strong>ಬೆಂಗಳೂರು:</strong></span> ರಾಜ್ಯದಲ್ಲಿ ಅಮೂಲ್ ಹಾಲು, ಮೊಸರು ಮಾರಾಟ ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಮೂಲ್ ಉತ್ಪನ್ನಗಳನ್ನು ಎಸೆದು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಅಮೂಲ್ ಬ್ರ್ಯಾಂಡ್ನ ಹಾಲು, ಮೊಸರು, ತುಪ್ಪ, ಬೆಣ್ಣೆ ಉತ್ಪನ್ನಗಳನ್ನು ರಸ್ತೆಗೆ ಎಸೆದ ಪ್ರತಿಭಟನಕಾರರು ಯಾವುದೇ ಕಾರಣಕ್ಕೂ ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ಕೇಂದ್ರ ಸರ್ಕಾರ ಹಾಗೂ ಅಮೂಲ್ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಅಮೂಲ್ ವ್ಯವಸ್ಥಾಪಕ ನಿರ್ದೇಶಕರ ಪ್ರತಿಕೃತಿಗೆ ಬೆಂಕಿ ಆಕ್ರೋಶ ಹೊರಹಾಕಿದರು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.</p>.<p>‘ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳ ಜತೆಗೆ ಚೆಲ್ಲಾಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ) ಅನ್ನು ಅಮೂಲ್ ನಾಶ ಮಾಡಲು ಮುಂದಾಗಿದೆ. ಇದಕ್ಕೆ ರಾಜ್ಯದ ಜನರು ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರವು ನಂದಿನಿಯನ್ನು ಅಮೂಲ್ ಜತೆಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಈ ಪ್ರಯತ್ನ ಇಲ್ಲಿಗೆ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ’ ಎಂದು ವೇದಿಕೆ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಎಚ್ಚರಿಸಿದರು.</p>.<p>ಯುವ ಘಟಕದ ರಾಜ್ಯ ಅಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ ಅವರು, ಅಮೂಲ್ ಹಠಮಾರಿತನದೊಂದಿಗೆ ಹಾಲು-ಮೊಸರು ವ್ಯಾಪಾರ ಮುಂದುವಸಿದರೆ ಕರ್ನಾಟಕದಲ್ಲಿ ಅಮೂಲ್ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸರ್ಕಾರವು ಪೊಲೀಸರನ್ನು ಮುಂದೆ ಬಿಟ್ಟು ಬಂಧಿಸಿದೆ. ದೌರ್ಜನ್ಯವನ್ನು ಸವಾಲಾಗಿ ಸ್ವೀಕರಿಸಲಿದ್ದೇವೆ. ರಾಜ್ಯದ ಮೂಲೆಮೂಲೆಗಳಲ್ಲೂ ಹೋರಾಟ ಮೊಳಗಲಿದೆ ಎಂದು ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ ಹೇಳಿದರು.</p>.<p>ಶ್ವೇತಾ ಮೋಹನ್, ಗೋಮೂರ್ತಿ ಯಾದವ್, ವೀರಭದ್ರ, ಕುಮಾರ್ (ಆಟೋ ಘಟಕ), ಕೆ.ಪಿ.ನರಸಿಂಹ, ಕಾರ್ತಿಕ್, ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="text-decoration:underline;"><strong>ಬೆಂಗಳೂರು:</strong></span> ರಾಜ್ಯದಲ್ಲಿ ಅಮೂಲ್ ಹಾಲು, ಮೊಸರು ಮಾರಾಟ ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಮೂಲ್ ಉತ್ಪನ್ನಗಳನ್ನು ಎಸೆದು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಅಮೂಲ್ ಬ್ರ್ಯಾಂಡ್ನ ಹಾಲು, ಮೊಸರು, ತುಪ್ಪ, ಬೆಣ್ಣೆ ಉತ್ಪನ್ನಗಳನ್ನು ರಸ್ತೆಗೆ ಎಸೆದ ಪ್ರತಿಭಟನಕಾರರು ಯಾವುದೇ ಕಾರಣಕ್ಕೂ ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ಕೇಂದ್ರ ಸರ್ಕಾರ ಹಾಗೂ ಅಮೂಲ್ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಅಮೂಲ್ ವ್ಯವಸ್ಥಾಪಕ ನಿರ್ದೇಶಕರ ಪ್ರತಿಕೃತಿಗೆ ಬೆಂಕಿ ಆಕ್ರೋಶ ಹೊರಹಾಕಿದರು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.</p>.<p>‘ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳ ಜತೆಗೆ ಚೆಲ್ಲಾಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ) ಅನ್ನು ಅಮೂಲ್ ನಾಶ ಮಾಡಲು ಮುಂದಾಗಿದೆ. ಇದಕ್ಕೆ ರಾಜ್ಯದ ಜನರು ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರವು ನಂದಿನಿಯನ್ನು ಅಮೂಲ್ ಜತೆಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಈ ಪ್ರಯತ್ನ ಇಲ್ಲಿಗೆ ನಿಲ್ಲಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ’ ಎಂದು ವೇದಿಕೆ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಎಚ್ಚರಿಸಿದರು.</p>.<p>ಯುವ ಘಟಕದ ರಾಜ್ಯ ಅಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ ಅವರು, ಅಮೂಲ್ ಹಠಮಾರಿತನದೊಂದಿಗೆ ಹಾಲು-ಮೊಸರು ವ್ಯಾಪಾರ ಮುಂದುವಸಿದರೆ ಕರ್ನಾಟಕದಲ್ಲಿ ಅಮೂಲ್ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸರ್ಕಾರವು ಪೊಲೀಸರನ್ನು ಮುಂದೆ ಬಿಟ್ಟು ಬಂಧಿಸಿದೆ. ದೌರ್ಜನ್ಯವನ್ನು ಸವಾಲಾಗಿ ಸ್ವೀಕರಿಸಲಿದ್ದೇವೆ. ರಾಜ್ಯದ ಮೂಲೆಮೂಲೆಗಳಲ್ಲೂ ಹೋರಾಟ ಮೊಳಗಲಿದೆ ಎಂದು ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ ಹೇಳಿದರು.</p>.<p>ಶ್ವೇತಾ ಮೋಹನ್, ಗೋಮೂರ್ತಿ ಯಾದವ್, ವೀರಭದ್ರ, ಕುಮಾರ್ (ಆಟೋ ಘಟಕ), ಕೆ.ಪಿ.ನರಸಿಂಹ, ಕಾರ್ತಿಕ್, ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>