‘ಉತ್ತರ ಭಾರತದ ರಾಜ್ಯದವರಿಗೆ ಕರ್ನಾಟಕದ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಬೆಂಗಳೂರು, ಮೈಸೂರಿನ ಬಗ್ಗೆ ಮಾತ್ರ ಅಲ್ಪಸ್ವಲ್ಪ ತಿಳಿದುಕೊಂಡಿದ್ದಾರೆ. ಕನ್ನಡ ಭಾಷೆಯು ರಾಷ್ಟ್ರಮಟ್ಟದಲ್ಲಿ ಬೆಳವಣಿಗೆ ಹೊಂದಿದರೆ ಕರ್ನಾಟಕದ ಬಗ್ಗೆ ತಿಳಿದುಕೊಳ್ಳಲು ಎಲ್ಲರೂ ಉತ್ಸುಕರಾಗುತ್ತಾರೆ. ಹೀಗಾಗಿ, ವಿಶಾಲ ದೃಷ್ಟಿಕೋನದೊಂದಿಗೆ ಕಾರ್ಯತತ್ಪರರಾಗಬೇಕು.ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನ ದೇಶದ ವಿವಿಧೆಡೆ ನಡೆಯುತ್ತದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಸಾಹಿತಿಗಳನ್ನು ಆಹ್ವಾನಿಸಲಾಗುತ್ತದೆ. ಆದರೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ’ ಎಂದುಜಿ.ಎನ್.ಉಪಾಧ್ಯ ತಿಳಿಸಿದರು.