<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಹಾಲೇನಹಳ್ಳಿ ವಾರ್ಡ್ನ ತರನಂ ಭಾನು, ಉಪಾಧ್ಯಕ್ಷರಾಗಿ ಮಾಕೇನಹಳ್ಳಿಯ ಎಂ.ಜಿ. ರಂಗನಾಥ ಸ್ವಾಮಿ ಗುರುವಾರ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 16 ಸದಸ್ಯ ಬಲದ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ತಲಾ 8 ಕ್ಷೇತ್ರಗಳಲ್ಲಿ ಜಯಗಳಿಸಿದ್ದರಿಂದ ಅಧ್ಯಕ್ಷರು ಯಾರಾಗುತ್ತಾರೆ ಎಂಬುದು ಕುತೂಹಲ ಕೆರಳಿಸಿತ್ತು.</p>.<p>ಅಧ್ಯಕ್ಷ ಹುದ್ದೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ತರನಂ ಭಾನು ಹಾಗೂ ಉಪಾಧ್ಯಕ್ಷ ಹುದ್ದೆಗೆ ಎಂ.ಜಿ ರಂಗನಾಥ ಸ್ವಾಮಿ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಅಭ್ಯರ್ಥಿಗಳಾಗಿ ಚಿಕ್ಕಮಣಿ ಸುಂದರ್ ಮತ್ತು ಗಂಗಾಧರ್ ನಾಮಪತ್ರ ಸಲ್ಲಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳಿಗೂ ತಲಾ 8 ಮತಗಳು ಬಂದಿದ್ದರಿಂದ ಲಾಟರಿ ಎತ್ತಲಾಯಿತು. ತರನಂ ಬಾನು ಆಯ್ಕೆಯಾದರು. ಎಂಟು ಮತ ಪಡೆದ ರಂಗನಾಥ ಸ್ವಾಮಿ ಉಪಾಧ್ಯಕ್ಷರಾದರು. ಎರಡು ಮತಗಳು ಅಸಿಂಧುವಾಗಿದ್ದವು.</p>.<p>ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಸುರೇಶ್ ಕಲಬುರ್ಗಿ ಚುನಾವಣಾಧಿಕಾರಿಗಳಾಗಿದ್ದರು. ಪಿಡಿಒ ಮಂಜುನಾಥ್, ಪಂಚಾಯಿತಿ ಸದಸ್ಯರುಗಳಾದ ಡಿ.ಲೋಕೇಶ್, ಕೆ.ರಾಮಾಂಜನೇಯ, ನರೇಂದ್ರ ಬಾಬು, ಶೋಭಾರಾಣಿ, ನರಸಮ್ಮ, ನಾಗರತ್ನಮ್ಮ, ಹೇಮಲತಾಮ ಸಿದ್ದಲಕ್ಷ್ಮಮ್ಮ, ಲಲಿತ, ಗ.ನಾಗರಾಜು, ಹನುಮಯ್ಯ ಗಂಗಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಹಾಲೇನಹಳ್ಳಿ ವಾರ್ಡ್ನ ತರನಂ ಭಾನು, ಉಪಾಧ್ಯಕ್ಷರಾಗಿ ಮಾಕೇನಹಳ್ಳಿಯ ಎಂ.ಜಿ. ರಂಗನಾಥ ಸ್ವಾಮಿ ಗುರುವಾರ ಆಯ್ಕೆಯಾದರು.</p>.<p>ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 16 ಸದಸ್ಯ ಬಲದ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ತಲಾ 8 ಕ್ಷೇತ್ರಗಳಲ್ಲಿ ಜಯಗಳಿಸಿದ್ದರಿಂದ ಅಧ್ಯಕ್ಷರು ಯಾರಾಗುತ್ತಾರೆ ಎಂಬುದು ಕುತೂಹಲ ಕೆರಳಿಸಿತ್ತು.</p>.<p>ಅಧ್ಯಕ್ಷ ಹುದ್ದೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ತರನಂ ಭಾನು ಹಾಗೂ ಉಪಾಧ್ಯಕ್ಷ ಹುದ್ದೆಗೆ ಎಂ.ಜಿ ರಂಗನಾಥ ಸ್ವಾಮಿ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಅಭ್ಯರ್ಥಿಗಳಾಗಿ ಚಿಕ್ಕಮಣಿ ಸುಂದರ್ ಮತ್ತು ಗಂಗಾಧರ್ ನಾಮಪತ್ರ ಸಲ್ಲಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳಿಗೂ ತಲಾ 8 ಮತಗಳು ಬಂದಿದ್ದರಿಂದ ಲಾಟರಿ ಎತ್ತಲಾಯಿತು. ತರನಂ ಬಾನು ಆಯ್ಕೆಯಾದರು. ಎಂಟು ಮತ ಪಡೆದ ರಂಗನಾಥ ಸ್ವಾಮಿ ಉಪಾಧ್ಯಕ್ಷರಾದರು. ಎರಡು ಮತಗಳು ಅಸಿಂಧುವಾಗಿದ್ದವು.</p>.<p>ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಸುರೇಶ್ ಕಲಬುರ್ಗಿ ಚುನಾವಣಾಧಿಕಾರಿಗಳಾಗಿದ್ದರು. ಪಿಡಿಒ ಮಂಜುನಾಥ್, ಪಂಚಾಯಿತಿ ಸದಸ್ಯರುಗಳಾದ ಡಿ.ಲೋಕೇಶ್, ಕೆ.ರಾಮಾಂಜನೇಯ, ನರೇಂದ್ರ ಬಾಬು, ಶೋಭಾರಾಣಿ, ನರಸಮ್ಮ, ನಾಗರತ್ನಮ್ಮ, ಹೇಮಲತಾಮ ಸಿದ್ದಲಕ್ಷ್ಮಮ್ಮ, ಲಲಿತ, ಗ.ನಾಗರಾಜು, ಹನುಮಯ್ಯ ಗಂಗಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>