‘ಎಂ.ಎಸ್.ಪಾಳ್ಯದ ಕೊಳಚೆ ನೀರು ನೇರವಾಗಿ ರಾಜಕಾಲುವೆಗೆ ಹರಿಯಲು ಕೆರೆಯಲ್ಲಿಯೇ ಪೈಪ್ಲೈನ್ ವ್ಯವಸ್ಥೆ ಕಲ್ಪಿಸಿದ್ದಾರೆ. ಆದರೆ, ಅಳವಡಿಸಿರುವ ಕೊಳವೆಯ ಅಗಲ ಬಹಳ ಕಿರಿದಾಗಿದ್ದು, ಹರಿಯುವ ಕೊಳಚೆ ನೀರಿನ ಪ್ರಮಾಣ ಹೆಚ್ಚು ಇದೆ. ಹಾಗಾಗಿ ಕೊಳೆ ನೀರು ಕೆರೆಯ ಒಡಲಿಗೆ ನುಗ್ಗುತ್ತದೆ’ ಎಂದು ಸ್ಥಳೀಯ ನಿವಾಸಿ ಎಚ್.ಗೋಪಾಲಕೃಷ್ಣ ದೂರಿದರು.