‘ಶುಲ್ಕದ ವಿಚಾರವಾಗಿ ಕೆಲ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆಪೋಷಕರ ಮಕ್ಕಳನ್ನೇ ಗುರಿಯಾಗಿಸಿಕೊಂಡು ಶಿಕ್ಷೆ ನೀಡಲಾಗಿದೆ. ಶಾಲಾ ಕೊಠಡಿಯಲ್ಲಿ ಮಕ್ಕಳನ್ನು ಇಡೀ ದಿನ ನಿಲ್ಲಿಸಲಾಗಿದೆ. ಅವರ ಜೊತೆ ಸೇರದಂತೆ ಇತರ ವಿದ್ಯಾರ್ಥಿಗಳಿಗೆ ಶಿಕ್ಷಕರೇ ಸೂಚಿಸುತ್ತಿದ್ದಾರೆ. ಇದರಿಂದ ಮಕ್ಕಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದು ತಿಳಿಸಿದ್ದಾರೆ.