<p><strong>ಬೆಂಗಳೂರು</strong>:ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಯಡಿ (ಕೆಪಿಎಂಇ) ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆರಾಜಗೋಪಾಲನಗರದ ನಾರಾಯಣ ಹೆಲ್ತ್ ಕೇರ್ ಸೆಂಟರ್ಗೆ ಬೀಗ ಹಾಕಲಾಗಿದೆ.</p>.<p>ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ನೇತೃತ್ವದಲ್ಲಿಬೆಂಗಳೂರು ನಗರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯುಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ (ಪಿಸಿಪಿಎನ್ ಡಿಟಿ) 1994ರ ಅನ್ವಯ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.</p>.<p>‘ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಆಯುಷ್ ವೈದ್ಯರು ತಲೆಮರೆಸಿಕೊಂಡಿದ್ದಾರೆ. ಕೇಂದ್ರ ನಡೆಸಲು ಆಸ್ಪತ್ರೆಯು ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಆಗಿರಲಿಲ್ಲ. ಹಠಾತ್ ಭೇಟಿ ಮೂಲಕ ಸ್ಥಳ ಪರಿಶೀಲನೆ ನಡೆಸಿದಾಗ ಈ ಕೇಂದ್ರದಲ್ಲಿ ವೈದ್ಯಕೀಯ ಗರ್ಭಪಾತ ಸಲಕರಣೆಗಳು, ಪೀಠೋಪಕರಣಗಳು ಪತ್ತೆಯಾಗಿವೆ’ ಎಂದು ಎಂದು ಡಾ.ಜಿ. ಶ್ರೀನಿವಾಸ್ ತಿಳಿಸಿದರು.</p>.<p>‘ಪಿಸಿಪಿಎನ್ ಡಿಟಿ ಕಾಯ್ದೆಯ ವಿರುದ್ಧ ಕೆಲವು ಸ್ಕ್ಯಾನಿಂಗ್ ಕೇಂದ್ರಗಳು ಭ್ರೂಣಲಿಂಗ ಪತ್ತೆಯಲ್ಲಿ ತೊಡಗಿ, ಗರ್ಭಪಾತಕ್ಕೆ ಕಳುಹಿಸಿಕೊಡುವ ಬಗ್ಗೆ ಇಲಾಖೆಗೆ ದೂರುಗಳು ಬಂದಿವೆ. ಹೆಣ್ಣು ಭ್ರೂಣಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲಾಧಿಕಾರಿ ಜೆ. ಮಂಜುನಾಥ್ ನಿರ್ದೇಶನದಂತೆ ಜಿಲ್ಲಾ ಸಮಿತಿಗಳು ಕಾಲಕಾಲಕ್ಕೆ ಈ ರೀತಿಯ ತಪಾಸಣಾ ಭೇಟಿಗಳನ್ನು ಕೈಗೊಳ್ಳುತ್ತಿದ್ದೇವೆ. ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ’ ಎಂದು ವಿವರಿಸಿದರು.</p>.<p>ಇದಕ್ಕೂ ಮೊದಲು ದಾಸರಹಳ್ಳಿಯ ವಿವೇಕ ಸ್ಕ್ಯಾನ್ಸ್ ಕೇಂದ್ರಕ್ಕೆ ತಂಡ ಭೇಟಿ ನೀಡಿತು.ಸ್ಕ್ಯಾನಿಂಗ್ ಕೊಠಡಿಯ ಟಿ.ವಿ ಪರದೆಯಲ್ಲಿ ಭ್ರೂಣದ ಚಿತ್ರವನ್ನು ಬಿತ್ತರಿಸದಂತೆ ಸೂಚಿಸಿದ ಆರೋಗ್ಯಾಧಿಕಾರಿ, ಟಿ.ವಿ ಪರದೆಯನ್ನು ತೆರವುಗೊಳಿಸುವಂತೆ ಸೂಚಿಸಿದರು. ಕಿರಿದಾದ ಸ್ಥಳದಲ್ಲಿ ಕೇಂದ್ರವನ್ನು ನಡೆಸುತ್ತಿರುವುದರ ಬಗ್ಗೆ ಕೇಂದ್ರಕ್ಕೆ ನೋಟಿಸ್ ನೀಡಿದರು.</p>.<p>ತಪಾಸಣಾ ಭೇಟಿಯ ಸಮಿತಿಯಲ್ಲಿ ಕೆ.ಆರ್. ಪುರ ಸಾರ್ವಜನಿಕ ಆಸ್ಪತ್ರೆಯ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪಾ, ಬೆಂಗಳೂರು ಉತ್ತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಮತ್ತಿತರರು ಇದ್ದರು.ನಾರಾಯಣ ಹೆಲ್ತ್ ಕೇರ್ ಸೆಂಟರರ್ನ ವೈದ್ಯಾಧಿಕಾರಿಗಳು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಯಡಿ (ಕೆಪಿಎಂಇ) ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆರಾಜಗೋಪಾಲನಗರದ ನಾರಾಯಣ ಹೆಲ್ತ್ ಕೇರ್ ಸೆಂಟರ್ಗೆ ಬೀಗ ಹಾಕಲಾಗಿದೆ.</p>.<p>ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ನೇತೃತ್ವದಲ್ಲಿಬೆಂಗಳೂರು ನಗರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯುಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ (ಪಿಸಿಪಿಎನ್ ಡಿಟಿ) 1994ರ ಅನ್ವಯ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.</p>.<p>‘ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಆಯುಷ್ ವೈದ್ಯರು ತಲೆಮರೆಸಿಕೊಂಡಿದ್ದಾರೆ. ಕೇಂದ್ರ ನಡೆಸಲು ಆಸ್ಪತ್ರೆಯು ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಆಗಿರಲಿಲ್ಲ. ಹಠಾತ್ ಭೇಟಿ ಮೂಲಕ ಸ್ಥಳ ಪರಿಶೀಲನೆ ನಡೆಸಿದಾಗ ಈ ಕೇಂದ್ರದಲ್ಲಿ ವೈದ್ಯಕೀಯ ಗರ್ಭಪಾತ ಸಲಕರಣೆಗಳು, ಪೀಠೋಪಕರಣಗಳು ಪತ್ತೆಯಾಗಿವೆ’ ಎಂದು ಎಂದು ಡಾ.ಜಿ. ಶ್ರೀನಿವಾಸ್ ತಿಳಿಸಿದರು.</p>.<p>‘ಪಿಸಿಪಿಎನ್ ಡಿಟಿ ಕಾಯ್ದೆಯ ವಿರುದ್ಧ ಕೆಲವು ಸ್ಕ್ಯಾನಿಂಗ್ ಕೇಂದ್ರಗಳು ಭ್ರೂಣಲಿಂಗ ಪತ್ತೆಯಲ್ಲಿ ತೊಡಗಿ, ಗರ್ಭಪಾತಕ್ಕೆ ಕಳುಹಿಸಿಕೊಡುವ ಬಗ್ಗೆ ಇಲಾಖೆಗೆ ದೂರುಗಳು ಬಂದಿವೆ. ಹೆಣ್ಣು ಭ್ರೂಣಹತ್ಯೆ ತಡೆಯುವ ಉದ್ದೇಶದಿಂದ ಜಿಲ್ಲಾಧಿಕಾರಿ ಜೆ. ಮಂಜುನಾಥ್ ನಿರ್ದೇಶನದಂತೆ ಜಿಲ್ಲಾ ಸಮಿತಿಗಳು ಕಾಲಕಾಲಕ್ಕೆ ಈ ರೀತಿಯ ತಪಾಸಣಾ ಭೇಟಿಗಳನ್ನು ಕೈಗೊಳ್ಳುತ್ತಿದ್ದೇವೆ. ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ’ ಎಂದು ವಿವರಿಸಿದರು.</p>.<p>ಇದಕ್ಕೂ ಮೊದಲು ದಾಸರಹಳ್ಳಿಯ ವಿವೇಕ ಸ್ಕ್ಯಾನ್ಸ್ ಕೇಂದ್ರಕ್ಕೆ ತಂಡ ಭೇಟಿ ನೀಡಿತು.ಸ್ಕ್ಯಾನಿಂಗ್ ಕೊಠಡಿಯ ಟಿ.ವಿ ಪರದೆಯಲ್ಲಿ ಭ್ರೂಣದ ಚಿತ್ರವನ್ನು ಬಿತ್ತರಿಸದಂತೆ ಸೂಚಿಸಿದ ಆರೋಗ್ಯಾಧಿಕಾರಿ, ಟಿ.ವಿ ಪರದೆಯನ್ನು ತೆರವುಗೊಳಿಸುವಂತೆ ಸೂಚಿಸಿದರು. ಕಿರಿದಾದ ಸ್ಥಳದಲ್ಲಿ ಕೇಂದ್ರವನ್ನು ನಡೆಸುತ್ತಿರುವುದರ ಬಗ್ಗೆ ಕೇಂದ್ರಕ್ಕೆ ನೋಟಿಸ್ ನೀಡಿದರು.</p>.<p>ತಪಾಸಣಾ ಭೇಟಿಯ ಸಮಿತಿಯಲ್ಲಿ ಕೆ.ಆರ್. ಪುರ ಸಾರ್ವಜನಿಕ ಆಸ್ಪತ್ರೆಯ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪಾ, ಬೆಂಗಳೂರು ಉತ್ತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಮತ್ತಿತರರು ಇದ್ದರು.ನಾರಾಯಣ ಹೆಲ್ತ್ ಕೇರ್ ಸೆಂಟರರ್ನ ವೈದ್ಯಾಧಿಕಾರಿಗಳು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>