ನಾರಾಯಣ ಹೆಲ್ತ್ ಸಿಟಿಯು ಮಜುಂದಾರ್ ಶಾ ವೈದ್ಯಕೀಯ ಪ್ರತಿಷ್ಠಾನದ ಸಹಯೋಗದಲ್ಲಿ ನಗರದಲ್ಲಿ ನಿರ್ಮಿಸಿರುವ ಆವಿಷ್ಕಾರ ಕೇಂದ್ರಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ವೈದ್ಯರು, ವಿಜ್ಞಾನಿಗಳು ಹಾಗೂ ತಂತ್ರಜ್ಞಾನ ಪರಿಣಿತರನ್ನು ಒಂದೆಡೆ ಸೇರಿಸಿ, ವೈದ್ಯಕೀಯ ಕ್ಷೇತ್ರದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಈ ಕೇಂದ್ರವು ಸಹಕಾರಿಯಾಗಲಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಕೂಡ ಆವಿಷ್ಕಾರ ನಡೆಸಬೇಕಿದೆ. ಆರೋಗ್ಯ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ ದೊರೆಯುತ್ತಿದೆ. ಅದೇ ರೀತಿ, ಈ ಕ್ಷೇತ್ರದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಂಶೋಧನೆಗಳು ಆಗುತ್ತಿವೆ’ ಎಂದರು.